spot_img
Friday, March 20, 2026
spot_img

ಮಣಿಪುರ : ಪೊಲೀಸ್‌ ಠಾಣೆ, ಶಾಸಕರ ಮನೆಗಳ ಮೇಲೆ ದಾಳಿ | ಎಂಟು ಮಂದಿ ಬಂಧನ

ಜನಪ್ರತಿನಿಧಿ (ಇಂಫಾಲ) : ಸಂಘರ್ಷ ಪೀಡಿತ ಮಣಿಪುರದಲ್ಲಿ ಪೊಲೀಸ್‌ ಠಾಣೆ ಹಾಗೂ ಶಾಸಕರ ನಿವಾಸಗಳ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು(ಶನಿವಾರ) ಮಾಹಿತಿ ನೀಡಿದ್ದಾರೆ.

ನವೆಂಬರ್‌ ೧೬ ರಂದುʻಶಾಸಕರ ಮನೆಗೆ ನುಗ್ಗಿ ಬೆಂಕಿ ಹಚ್ಚಿ ಲೂಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಫಾಲ್‌ ಪಶ್ಚಿಮ ಜಿಲ್ಲೆಯ ಪಾಟ್ಸೋಯಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಿಯಾಮ್‌ ಮಮಾಂಗ್‌ ಲೈಕೈ ಎಂಬಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಜೋಂಗ್ಥಮ್‌ ಥೊಯ್ಟಾ (೨೦ ವ) ಎಂದು ಗುರುತಿಸಲಾಗಿದೆ.

ಅಲ್ಲದೇ, ನವೆಂಬರ್‌ ೨೭ರಂದು ಕಕ್ಚಿಂಗ್‌ ಪೊಲೀಸ್‌ ಠಾಣೆ ಮತ್ತು ಅದರ ಸಿಬ್ಬಂದಿ ಮೇಲೆ ದಾಳಿ ಮಾಡಿದ ೭ ಜನರನ್ನು ಗುರುವಾರ ಬಂಧಿಸಲಾಗಿದೆ. ಶಾಸಕರ ನಿವಾಸಗಳ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿಸಲಾದ ನಾಲ್ವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್‌ ಠಾಣೆ ದಾಳೆ ನಡೆಸಲಾಗಿತ್ತು.

ನವೆಂಬರ್‌ ೧೧ ರಂದು ಜಿರಿಬಾಮ್‌ ಜಿಲ್ಲೆಯಲ್ಲಿ ಶಂಕಿತ ಹಮರ್‌ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಗುಂಡಿನ ಚಕಮಕಿಯಲ್ಲಿ ೧೯ ಶಂಕಿತ ಉಗ್ರರು ಹತರಾಗಿದ್ದರು. ಈ ವೇಳೆ ನಿರಾಶ್ರಿತರ ಕೇಂದ್ರದಲ್ಲಿದ್ದ ಮೈತೇಯಿ ಸಮುದಾಯಕ್ಕೆ ಸೇರಿದ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದರು.

ಶೋಧ ಕಾರ್ಯಾಚರಣೆ ಬಳಿಕ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳ ಶವಗಳು ನದಿಯಲ್ಲಿ ಪತ್ತೆಯಾಗಿದ್ದವು. ಇದರಿಂದ ಕುಪಿತಗೊಂಡ ಜನರ ಗುಂಪು ಬಿಜೆಪಿಯ ಮೂವರು ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿತ್ತು. ಅದರಲ್ಲಿ ಒಬ್ಬರು ಸಚಿವರ ಮನೆಯೂ ಸೇರಿತ್ತು.

ಕಳೆದ ವರ್ಷದ ಮೇ ತಿಂಗಳಿನಲ್ಲಿ ಮಣಿಪುರದಲ್ಲಿ ಮೈತೇಯಿ ಕುಕಿ ಜೋ ಸಂಘರ್ಷ ಶುರುವಾಗಿದ್ದು, ಈವರೆಗೆ ಸುಮಾರು ೨೫೦ ಜನ ಮೃತಪಟ್ಟಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!