spot_img
Wednesday, April 1, 2026
spot_img

ಉಪ್ಪುಂದ: ಯುವ ಮಾನಸ ಗಾಣಿಗ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ನೂತನ ಅಧ್ಯಕ್ಷರಾಗಿ ಮಂಜುನಾಥ್ ಶಿಕಾರಿಪುರ ಆಯ್ಕೆ

ಕುಂದಾಪುರ: ಉಪ್ಪುಂದದ ಯುವಮಾನಸ ಗಾಣಿಗ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಶಿಕಾರಿಪುರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಕಚೇರಿಯಲ್ಲಿ ನಡೆದ ಆಯ್ಕೆ ಸಭೆಯಲ್ಲಿ ಹಾಲಿ ಅಧ್ಯಕ್ಷರ ಆಶಯದಂತೆ ಹಾಗೂ ಎಲ್ಲಾ ಟ್ರಸ್ಟಿಗಳ ಒಪ್ಪಿಗೆಯಂತೆ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯದರ್ಶಿಯಾಗಿ ಸವಿತಾ ದಿನೇಶ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ಸುಬ್ರಮಣ್ಯ. ಜೆ ಉಪ್ಪುಂದ ಹಾಗೂ ಕೋಶಾಧಿಕಾರಿಯಾಗಿ ಅನಂತ ಗಾಣಿಗ ಉಪ್ಪುಂದ ಆಯ್ಕೆಯಾದರು. ಸಾಧನ ಅಕಾಡೆಮಿಯ ಯಶಸ್ವಿಯ ರೂವಾರಿಯಾಗಿರುವ ಮಂಜುನಾಥ್ ಶಿಕಾರಿಪುರ ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಯುವ ಮಾನಸ ಗಾಣಿಗ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ ಕಳೆದ ೩ ವರ್ಷಗಳ ಹಿಂದೆ ಎಚ್ ಸುಬ್ಬಯ್ಯ ಶಿವಮೊಗ್ಗ ತಮ್ಮ ಹುಟ್ಟೂರಾದ ಉಪ್ಪುಂದದಲ್ಲಿ ಆರಂಭಿಸಿದರು. ಬಳಿಕ ಸಂಸ್ಥೆಯು ಗಾಣಿಗ ಸಮುದಾಯದ ಮಕ್ಕಳ ವಿದ್ಯಾಭ್ಯಾಸದ ನೆರವಿಗೆ ಮತ್ತು ಸರ್ಕಾರದ ಉನ್ನತ ಮಟ್ಟದ ಹುದ್ದೆಗಿಟ್ಟಿಸಲು ಅವಶ್ಯವಾದ ತರಭೇತಿಯನ್ನು ಕಾರ್ಯಾಗಾರಗಳನ್ನು ನಡೆಸುತ್ತಾ ಬಂದಿದೆ. ಟ್ರಸ್ಟ್ ನ ಆಡಳಿತ ಮಂಡಳಿಗೆ ನಿವೃತ್ತ ಕೆನರಾ ಬ್ಯಾಂಕ್ ಅಧಿಕಾರಿ ರತ್ನಾಕರ ಗಾಣಿಗ, ರಾಜು ಹುಳವಾಡಿ ಹಾಗೂ ಡಾ. ಸುಜಯ್ ಶಿವಮೊಗ್ಗರವರನ್ನು ನೂತನ ಸದಸ್ಯರನ್ನಾಗಿ ಸೇರ್ಪಡೆಗೊಳಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!