spot_img
Sunday, February 15, 2026
spot_img

ಎಸ್‌.ಎಂ ಕೃಷ್ಣ ಹೆಸರಿನಲ್ಲಿ ಪ್ರಶಸ್ತಿ, ವಿಕಾಸ ಸೌಧದ ಮುಂದೆ ಪ್ರತಿಮೆ ಸ್ಥಾಪನೆಗೆ ಪಕ್ಷಾತೀತವಾಗಿ ರಾಜ್ಯ ಸರ್ಕಾರಕ್ಕೆ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಗೌರವಾರ್ಥ ಪ್ರಶಸ್ತಿಗಳನ್ನು ಸ್ಥಾಪಿಸಬೇಕು ಮತ್ತು ಸ್ಮಾರಕವನ್ನು ನಿರ್ಮಿಸಬೇಕು ಎಂದು ರಾಜಕಾರಣಿಗಳು ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಪಕ್ಷಾತೀತವಾಗಿ ಒತ್ತಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದು, ರಾಜ್ಯದ ವಿಶೇಷವಾಗಿ ಬೆಂಗಳೂರಿನ ಬೆಳವಣಿಗೆಗೆ ಕೃಷ್ಣ ಅವರ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಕೃಷ್ಣ ಅವರು ದೂರದೃಷ್ಟಿಯ ನಾಯಕರಾಗಿದ್ದರು, ಬೆಂಗಳೂರನ್ನು ಜಾಗತಿಕ ಐಟಿ ನಕ್ಷೆಯಲ್ಲಿ ಇರಿಸಲು ಅವರ ಪ್ರಯತ್ನಗಳು ಶ್ಲಾಘನೀಯ ಎಂದು ಅವರು ಪತ್ರದ ಸಿಎಂ ಗೆ ಬರೆದ ಪತ್ರದ ಮೂಲಕ ಹೇಳಿದ್ದಾರೆ.

ವಿಕಾಸ ಸೌಧ ಆವರಣದಲ್ಲಿ ಕೃಷ್ಣ ಅವರ ಪ್ರತಿಮೆ ಸ್ಥಾಪಿಸಬೇಕು ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ. ಎಸ್.ಎಂ ಕೃಷ್ಣಅವರಿಂದಲೇ ವಿಕಾಸ ಸೌಧ ಅಸ್ತಿತ್ವಕ್ಕೆ ಬಂದಿದೆ. ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಬೆಂಗಳೂರಿನ ಉದ್ದೇಶಿತ ‘ನಾಲೆಡ್ಜ್ ಸಿಟಿ’ಗೆ ಕೃಷ್ಣ ಹೆಸರಿಡಲು ಕ್ರಮಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಬಿಬಿಎಂಪಿ ಕೆಂಪೇಗೌಡರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತದೆ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿದ್ದಾರೆ. ಬೆಂಗಳೂರಿನ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಗುರುತಿಸಿ ಅಧಿಕಾರಿಗಳು ಅಥವಾ ನಾಗರಿಕರಿಗೆ ಕೃಷ್ಣನ ಗೌರವಾರ್ಥ ಪ್ರಶಸ್ತಿಯನ್ನು ಕೂಡ ಸ್ಥಾಪಿಸಬೇಕು ಎಂದವರು ಒತ್ತಾಯಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!