spot_img
Sunday, February 15, 2026
spot_img

ಗಂಗೊಳ್ಳಿ ಗ್ರಾ.ಪಂ.ನಲ್ಲಿ ಕಾಂಗ್ರೆಸ್ ಗೆಲುವು: ಕಾಂಗ್ರೆಸ್ ಆಡಳಿತದ ಯಶಸ್ಸಿಗೆ ಸಾಕ್ಷಿ-ಅಶೋಕ್ ಕುಮಾರ್ ಕೊಡವೂರು

ಉಡುಪಿ: ಕುಂದಾಪುರ ತಾಲೂಕಿನ ಬೈಂದೂರು ವಿಧಾನಸಭಾ ಕ್ಷೇತ್ರದ ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿಗಳ ಗಳಿಸಿದೆ. ಒಟ್ಟು 33 ಸ್ಥಾನಗಳ ಪೈಕಿ 12 ರಲ್ಲಿ ಕಾಂಗ್ರೆಸ್ ಬೆಂಬಲಿತರು ಮತ್ತು ಏಳರಲ್ಲಿ ಎಸ್.ಡಿಪಿ‌ಐ ಬೆಂಬಲಿತರು ಜಯಗಳಿಸುವ ಮೂಲಕ ಕಳೆದ 20 ವರ್ಷಗಳ ನಂತರ ಅಧಿಕಾರದ ಗದ್ದುಗೆ ಕಾಂಗ್ರೆಸ್ ಮತ್ತು ಎಸ್.ಡಿಪಿ‌ಐ ಮೈತ್ರಿಗೆ ಲಭಿಸಿದೆ. ಗ್ರಾಮಾಂತರಗಳಲ್ಲಿಯೂ ಕಾಂಗ್ರೆಸ್ ಆಡಳಿತವನ್ನು ಜನತೆ ಮೆಚ್ಚುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ.

ಗಂಗೊಳ್ಳಿ ಪಂಚಾಯತ್ ಚುನಾವಣಾ ಫಲಿತಾಂಶವು ಜಿಲ್ಲೆಯಲ್ಲಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಹಾಗೂ ಪಂಚಾಯಿತಿ ಚುನಾವಣಾ ಫಲಿತಾಂಶಕ್ಕೆ ಪೂರಕವಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಗಂಗೊಳ್ಳಿ ಪಂಚಾಯತ್ ಗೆಲುವಿನಲ್ಲಿ ಶ್ರಮಿಸಿದ ಸ್ಥಳೀಯ ಪಕ್ಷದ ಮುಖಂಡರು, ಕಾರ್ಯಕರ್ತರು ಬ್ಲಾಕ್ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!