spot_img
Thursday, April 2, 2026
spot_img

ಹಾಸ್ಟೆಲ್ ಮಕ್ಕಳ ಆಹಾರ ವಿತರಣೆಯಲ್ಲಿ ಯಾವುದೇ ಲೋಪವಾಗಬಾರದು-ಗಂಟಿಹೊಳೆ ಸೂಚನೆ

ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ಡಿ.26ರಂದು ಬೈಂದೂರು ತಾಲೂಕು ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಹಾಗೂ ಹಾಸ್ಟೆಲ್ ಗಳ ನಿರ್ವಹಣೆ ಹಾಗೂ ಮಕ್ಕಳ ದಾಖಲಾತಿ ಬಗ್ಗೆ ಮಾಹಿತಿ ಪಡೆದುಕೊಂಡು ಅಗತ್ಯ ಸೂಚನೆಗಳನ್ನು ನೀಡಿದರು.

2024-25 ನೇ ಸಾಲಿಗೆ ಹಾಸ್ಟೆಲ್‌ಗಳಿಗೆ ಮಕ್ಕಳ ದಾಖಲಾತಿ ಪ್ರಕ್ರಿಯೆ ಮುಗಿದಿದ್ದು ವಿದ್ಯಾರ್ಥಿಗಳ ಊಟೋಪಚಾರಕ್ಕೆ ಮಾಸಿಕ ರೇಷನ್, ತರಕಾರಿ ಹಾಗೂ ಇನ್ನಿತರ ಆಹಾರ ಸಾಮಾಗ್ರಿಗಳು ಕೊರತೆಯಾಗದಂತೆ ನೋಡಿ ಕೊಳ್ಳುವುದು, ವಾರ್ಡನ್‌ಗಳು ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಸೇರಿದಂತೆ ವಿದ್ಯಾರ್ಥಿಗಳ ವಾಸ್ತವ್ಯ ಹಾಗೂ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ ಅಡಚಣೆಯಾಗದಂತೆ ಸೂಕ್ತ ಕ್ರಮ ವಹಿಸಲು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಉಡುಪಿ ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಾರ್ಡನ್ ಗಳ ತೀವ್ರ ಕೊರತೆ ಇದ್ದು 5-6ಹಾಸ್ಟೆಲ್ ಗಳಿಗೆ ಒಬ್ಬರು ವಾರ್ಡನ್ ಎಂಬ ಪರಿಸ್ಥಿತಿ ಇದೆ. ಅಲ್ಲದೆ ಬೈಂದೂರು ಹಾಗೂ ಕುಂದಾಪುರದಲ್ಲಿ ಪೋಸ್ಟ್ ಮೆಟ್ರಿಕ್ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ತೀವ್ರ ಬೇಡಿಕೆ ಇದ್ದು ಹಾಸ್ಟೆಲ್ ಗಾಗಿ ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿ ಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ತಿಳಿಸಲಾಗಿದೆ, ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ ಹಾಗೂ ಸದನದಲ್ಲೂ ಈ ಬಗ್ಗೆ ಧ್ವನಿ ಎತ್ತಲಾಗಿದೆ. ಹಾಗಾಗಿ ಕ್ಷೇತ್ರದ ಎರಡೂ ತಾಲೂಕಿನಲ್ಲಿ ಇರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ವಾರ್ಡನ್ ಹುದ್ದೆ ಖಾಲಿ ಇರುವ ಕಡೆ ವಾರ್ಡನ್ ಗಳನ್ನು ಭರ್ತಿ ಮಾಡಲು ಹಾಗೂ ಬೈಂದೂರು ಮತ್ತು ಕುಂದಾಪುರಕ್ಕೆ ಹೊಸದಾಗಿ ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಸರಕಾರ ಕ್ರಮ ವಹಿಸಬೇಕು, ಹಾಗಾಗಿ ಅಧಿಕಾರಿಗಳು ತಮ್ಮ ಹಂತದಲ್ಲಿ ಸೂಕ್ತ ಪ್ರಸ್ತಾವನೆಗಳನ್ನು ಸರಕಾರಕ್ಕೆ ಕಳುಹಿಸಲು ಸೂಚನೆ ನೀಡಿದರು. ವಿಧಾನ ಸಭೆಯ ಹಿಂದುಳಿದ ವರ್ಗಗಳ ಸಮಿತಿಯಲ್ಲಿ ಸದಸ್ಯನ ನೆಲೆಯಲ್ಲಿ ಇಲಾಖೆಯ ಸಮಸ್ಯೆಗಳನ್ನು ಇಲಾಖಾ ಮುಖ್ಯಸ್ಥರ ಗಮನಕ್ಕೂ ತರಲು ಪ್ರಯತ್ನಿಸುವುದಾಗಿ ಗುರುರಾಜ್ ಗಂಟಿಹೊಳೆ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ತಾಲೂಕು ಅಧಿಕಾರಿ ಹಾಗೂ ಕ್ಷೇತ್ರ ವ್ಯಾಪ್ತಿಯ ವಿವಿಧ ವಿದ್ಯಾರ್ಥಿ ನಿಲಯಗಳ ವಾರ್ಡನ್‌ಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!