spot_img
Sunday, February 15, 2026
spot_img

ಸಕಲ ಸರ್ಕಾರಿ, ಸೇನಾ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಕೊಡಗಿನ ಯೋಧ ದಿವಿನ್‌ ಅಂತ್ಯಕ್ರಿಯೆ !

ಜನಪ್ರತಿನಿಧಿ (ಕೊಡಗು) : ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಎಂಬಲ್ಲಿ ಇತ್ತೀಚೆಗೆ ಘಟಿಸಿದ್ದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದ ವೀರಯೋಧ ದಿವಿನ್‌ ಅವರ ಅಂತ್ಯಕ್ರಿಯೆ ಅವರ ಸ್ವಗ್ರಾಮ ಶನಿವಾರಸಂತೆ ಬಳಿಯ ಆಲೂರು ಸಿದ್ದಾಪುರದ ಮಾಲಂಬಿ ಗ್ರಾಮದಲ್ಲಿ ಸಕಲ ಸರ್ಕಾರಿ ಹಾಗೂ ಸೇನಾ ಗೌರವಗಳೊಂದಿಗೆ ನಡೆಯಿತು.

ಇದಕ್ಕೂ ಮೊದಲು ಕುಶಾಲನಗರದಿಂದ ಅವರ ಪಾರ್ಥಿವ ಶರೀರವನ್ನು ಮೆರವಣಿಗೆಯ ಮೂಲಕ್ಕೆ ಸ್ವಗ್ರಾಮಕ್ಕೆ ತರಲಾಯಿತು. ದಾರಿಯುದ್ದಕ್ಕೂ ನೂರಾರು ಮಂದಿ ಮೃತ ಯೋಧನಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಶಾಲಾ ವಿದ್ಯಾರ್ಥಿಗಳು, ಕಾಲೇಜು ವಿದ್ಯಾರ್ಥಿಗಳು, ಗ್ರಾಮಸ್ಥರು ಪುಷ್ಪ ನಮನ ಸಲ್ಲಿಸಿ ಕಂಬನಿ ಮಿಡಿದರು.

ಆಲೂರು ಸಿದ್ದಾಪುರದ ಶಾಲಾ ಮೈದಾನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಮಂದಿ ಹುತಾತ್ಮ ಯೋಧ ದಿವಿನ್‌ ಅವರ ಅಂತಿಮ ದರ್ಶನ ಪಡೆದರು. ಬಳಿಕ ಮಾಲಂಬಿಯಲ್ಲಿರುವ ಅವರ ಮನೆಯಲ್ಲಿ ದಿವಿನ್‌ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು.

ನಂತರ ಅವರ ತೋಟದಲ್ಲಿ ಅವರ ಸಂಬಂಧಿ ಚಿರಾಗ್‌ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!