spot_img
Friday, January 30, 2026
spot_img

ಮನು ಭಾಕರ್‌, ಡಿ. ಗುಕೇಶ್‌ ಸೇರಿ ನಾಲ್ವರಿಗೆ ಖೇಲ್‌ ರತ್ನ

ಜನಪ್ರತಿನಿಧಿ (ನವದೆಹಲಿ) : ಶೂಟ‌ರ್ ಮನು ಭಾಕರ್, ಚೆಸ್ ವಿಶ್ವ ಚಾಂಪಿಯನ್ ಡಿ. ಗುಕೇಶ್, ಭಾರತ ಹಾಕಿ ಪುರುಷರ ತಂಡ ನಾಯಕ ಹಮ್ರನ್‌ಪ್ರೀತ್‌ ಸಿಂಗ್‌, ಪ್ಯಾರಾ ಅಥ್ಲೆಟ್ ಪ್ರವೀಣ್ ಕುಮಾರ್ ಅವರಿಗೆ ಗುರುವಾರ ಭಾರತ ಸರ್ಕಾರವು ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ.

22 ವರ್ಷದ ಮನು ಭಾಕ‌ರ್ ಒಲಿಂಪಿಕ್ಸ್‌ನ ಒಂದೇ ಆವೃತ್ತಿಯಲ್ಲಿ ಎರಡು ಪದಕಗಳನ್ನು ಗೆದ್ದು ಇತಿಹಾಸ ಬರೆದಿದ್ದರು. 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ವಿಭಾಗ ಹಾಗೂ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಕಂಚು ಜಯಿಸಿದ್ದರು.

ಇದೇ ಒಲಿಂಪಿಕ್ಸ್‌ನಲ್ಲಿ ಹಮ್ರನ್‌ಪ್ರೀತ್ ಸಿಂಗ್ ನೇತೃತ್ವದ ಭಾರತದ ಹಾಕಿ ಪುರುಷರ ತಂಡವು ಕಂಚಿನ ಸಾಧನೆ ಮಾಡಿತ್ತು. 18 ವರ್ಷದ ಗುಕೇಶ್ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದಿದ್ದರು.

ಮಂಡಿ ಕೆಳಗಿನ ಕಾಲು ಕಳೆದುಕೊಂಡಿರುವ ಹೈ ಜಂಪ್ ಪಟು ಪ್ರವೀಣ್‌, ಪ್ಯಾರಾ ಒಲಿಂಪಿಕ್ಸ್‌ನಲ್ಲಿ T64 ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.

ಜ. 17ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕ್ರೀಡಾ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಹೇಳಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!