spot_img
Saturday, February 14, 2026
spot_img

ಪಿ.ಎಂ ಸೂರ್ಯ ಘರ್ ಯೋಜನೆ ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ

ಕುಂದಾಪುರ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ, ಉಡುಪಿ ಜಿಲ್ಲೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದು, 4447 ಮಂದಿ ಈಗಾಗಲೇ ನೊಂದಾಯಿಸಿಕೊಂಡಿದ್ದಾರೆ. 827 ಫಲಾನುಭವಿಗಳನ್ನು ಸರಬರಾಜು ಕಂಪನಿ ಆಯ್ಕೆ ಮಾಡಿಕೊಂಡಿದ್ದು, 378 ಮಂದಿಗೆ ಅವರ ಮನೆಯ ತಾರಸಿ ಮೇಲೆ ಸೋಲಾರ್ ಫ್ಯಾನಲ್ ಅಳವಡಿಸಿ ಸಂಪರ್ಕ ನೀಡಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಒಟ್ಟು ಒಬ್ಬ ಫಲಾನುಭವಿಗೆ 300ಕ್ಕೂ ಮಿಕ್ಕಿ ಯೂನಿಟ್ ವಿದ್ಯುತ್ ಒದಗಿಸುವ ದೃಷ್ಟಿಯಿಂದ 2,06,000 ರೂ. ಸಾಲ ಸೌಲಭ್ಯವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಒದಗಿಸಲಾಗುತ್ತದೆ. ಆ ಪೈಕಿ 78,000 ಕೇಂದ್ರ ಸರ್ಕಾರ ಸಬ್ಸಿಡಿ ಒದಗಿಸುತ್ತಿದೆ. ಉಡುಪಿ ಜಿಲ್ಲೆಗೆ ಈಗಾಗಲೇ 299 ಫಲಾನುಭವಿಗಳ ಖಾತೆಗೆ ಸಬ್ಸಿಡಿ ಬಂದಿದೆ ಎಂದು ಸಂಸದರ ಹೇಳಿಕೆ ತಿಳಿಸಿದೆ. ಹಾಲಿವರ್ಷ ಸೂರ್ಯ ಘರ್ ಯೋಜನೆಯ ಮೂಲಕ 1 ಕೋಟಿ ಕುಟುಂಬಗಳಿಗೆ ಸೋಲಾರ್ ವಿದ್ಯುತ್ ಅಳವಡಿಸುವ ಯೋಜನೆಯ ಗುರಿ ಕೇಂದ್ರ ಸರಕಾರ ಹೊಂದಿದೆ. ಬ್ಯಾಂಕ್ ಸಾಲ ಪಡೆದು ಕೇವಲ ಒಂದು ತಿಂಗಳೊಳಗೆ ಕೇಂದ್ರ ಸರ್ಕಾರದ ಮೂಲಕ ಫಲಾನುಭವಿಗಳ ಖಾತೆಗೆ ಸಬ್ಸಿಡಿ ಒದಗಿಸಿದ್ದು ಈ ಯೋಜನೆಯ ವಿಶೇಷವಾಗಿದೆ ಎಂದು ಸಂಸದರ ಕಛೇರಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!