spot_img
Saturday, February 14, 2026
spot_img

ಹರೆಗೂಡು: ಗ್ರಾಮೀಣ ಕ್ರೀಡಾಕೂಟ ಉದ್ಘಾಟನೆ

ಕುಂದಾಪುರ: ಕ್ರೀಡೆಯಲ್ಲಿ ಭಾಗವಹಿಸಿ, ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಅನುಭವಿಸಿ ತಮ್ಮ ಜೀವನದಲ್ಲಿ ಬರುವಂತಹ ಸವಾಲುಗಳನ್ನು ಎದುರಿಸಲು ಸಾಧ್ಯ ವೆಂದು ಕುಂದಾಪುರ ಉದ್ಯಮಿ ಕೆ‌ಆರ್ ನಾಯ್ಕ್ ಹೇಳಿದರು.

ಲಯನ್ಸ್ ಕ್ಲಬ್ ಕುಂದಾಪುರ ಕ್ರೌನ್, ಮಹಾ ವಿಷ್ಣು ಯುವಕ ಮಂಡಲ ಹರೇಗೋಡು, ಭದ್ರಮಹಾಕಾಳಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ, ಕಟ್ ಬೆಲ್ತೂರ್ ಗ್ರಾಮ ಪಂಚಾಯತ್ ಶ್ರೀವತ್ಸ ಕೋಚಿಂಗ್ ಸೆಂಟರ್ ಹರೇಗೋಡು ನಮ್ಮ ಭೂಮಿ ಸಂಸ್ಥೆ ಹಟ್ಟಿಯಂಗಡಿ ಕನ್ಯಾನ. ಹಾಗೂ ಮಾನಸ ಯುವತಿ ಮಂಡಲ ಇವರ ಜಂಟಿ ಆಶ್ರಯದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ಲಯನ್ಸ್ ಕ್ಲಬ್ ಕ್ರೌನ್ ಇದರ ಅಧ್ಯಕ್ಷರಾದ ದಿನಕರ ಶೆಟ್ಟಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ನಮ್ಮ ಭೂಮಿ ಸಂಸ್ಥೆಯ ನಿರ್ದೇಶಕರಾದ ಶ್ರೀನಿವಾಸ ಗಾಣಿಗ, ಲಯನ್ ಪ್ರವೀಣ್ ಕುಮಾರ್ ಶೆಟ್ಟಿ, ಕುಂದಾಪುರ ಫೇಮಸ್ ಫೂಟ್ ವೇರ್ ಇದರ ಅಶ್ರಫ್, ಅಶೋಕ್ ಕುಮಾರ್ ಕುಂದಾಪುರ, ನರಸಿಂಹ ಗಾಣಿಗ ಹರೇಗೋಡು, ವಕೀಲರಾದ ರಾಘವೇಂದ್ರ ಚರಣ್ ನಾವುಡ, ಯುವಕ ಮಂಡಲದ ಅಧ್ಯಕ್ಷರಾದ ದೀಪಕ್ ಆರ್ ಗಾಣಿಗ, ಯುವತಿ ಮಂಡಲದ ಅಧ್ಯಕ್ಷರಾದ ಗೀತಾ ಸುರೇಶ ದೇವಾಡಿಗ, ಯುವತಿ ಮಂಡಲದ ಗೌರವಾಧ್ಯಕ್ಷರಾದ ಗಂಗಮ್ಮ ಸುಂದರ್ ಗಾಣಿಗ ಉಪಸ್ಥಿತರಿದ್ದರು.

ರವೀಶ್ ಡಿ.ಹೆಚ್ ಇವರು ಸಾಗತಿಸಿ, ಪ್ರಸಾದ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಲಿಖಿತಾ ದೀಪಕ್ ರಾಜ್ ವಂದಿಸಿದರು. ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳಿಗೆ ಮಹಿಳೆಯರಿಗೆ ಗ್ರಾಮೀಣ ಕ್ರೀಡಾಕೂಟವನ್ನು ನಮ್ಮ ಭೂಮಿ ಸಂಸ್ಥೆಯ ಸದಸ್ಯರು ನೆಡೆಸಿ ಕೊಟ್ಟರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!