spot_img
Monday, March 16, 2026
spot_img

ಕುಮಾರವ್ಯಾಸ ಸ್ಮೃತಿ: ಗಂಗೊಳ್ಳಿಯಲ್ಲಿ ಗಮಕ ಪ್ರಾತ್ಯಕ್ಷಿಕೆ

ಗಂಗೊಳ್ಳಿ :  ಕನ್ನಡ ನಾಡು ಕಂಡ ಅತ್ಯದ್ಭುತ ಕವಿ ಕುಮಾರವ್ಯಾಸ. ಕನ್ನಡ ನೆಲದ ಮನೆ ಮನಗಳಲ್ಲಿ ಭಾರತ ಕತೆಯನ್ನು ನೆಲೆಯಾಗುವಂತೆ, ಆಪ್ತವಾಗುವಂತೆ ಮಾಡಿದ ಧೀಮಂತ ಕವಿ. ಮಹಾ ಭಾರತ ಕಥಾ ವಸ್ತುವನ್ನು ಭಾಮಿನಿ ಷಟ್ಪದಿಯಲ್ಲಿ ರಚಿಸಿ, ಅದನ್ನು ಕೃಷ್ಣ ಕತೆಯೆಂದು ಸಾರಿದವನು. ಕುವೆಂಪು ಅವರು ಹೇಳುವಂತೆ ಕಲಿಯುಗದಲ್ಲೂ ದ್ವಾಪರವನ್ನು ಕಟ್ಟಿಕೊಟ್ಟವನು. ವ್ಯಾಸ ರಚಿತ ಭಾರತದ ಮುಂದೆ ತಾನು ಕುಮಾರವ್ಯಾಸನೆಂದು ಹೇಳಿಕೊಳ್ಳುವಲ್ಲಿ ನಾರಣಪ್ಪನ ವಿನಯ ಸಂಪನ್ನತೆ ಎದ್ದು ಕಾಣುತ್ತದೆ. ನಾಡಿನ ಮೂಲೆ ಮೂಲೆಗಳ ವಿದ್ವಾಂಸರನ್ನೂ, ಜನ ಸಾಮಾನ್ಯರನ್ನೂ ತನ್ನ ಕಾವ್ಯ ಸೊಬಗಿನಿಂದ ಬೆರಗುಗೊಳಿಸುತ್ತಾ ಒಂದರ್ಥದಲ್ಲಿ ಕನ್ನಡದ ಭಾಷಾ ಏಕೀಕರಣವನ್ನು ಸಾಧಿಸಿದ ಕವಿ ಎಂದು ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕದ ಅಧ್ಯಕ್ಷ ಎಚ್. ಸುಜಯೀಂದ್ರ ಹಂದೆ ಹೇಳಿದರು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಕುಂದಾಪುರ ಘಟಕದ ಆಯೋಜನೆಯಲ್ಲಿ ನಡೆದ ಕುಮಾರವ್ಯಾಸ ಸ್ಮೃತಿ ಮತ್ತು ಗಮಕ ಕಲಾ ಪ್ರಾತ್ಯಕ್ಷಿಕೆಯ ಸಂದರ್ಭ ಸುಜಯೀಂದ್ರ ಹಂದೆ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲ ದೇವಾಡಿಗ ಅವರು ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅಭ್ಯಾಗತರಾಗಿದ್ದ ಗಂಗೊಳ್ಳಿ ಜಿ.ಎಸ್. ವಿ.ಎಸ್. ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕಾಶೀನಾಥ ಪೈ ಶುಭ ಹಾರೈಸಿದರು.

ವಿದ್ಯಾರ್ಥಿಗಳಿಗಾಗಿ ಗಮಕಿ ಕುಮಾರಿ ಕಾವ್ಯ ಹಂದೆ ಕುಮಾರವ್ಯಾಸನ ಕರ್ಣ ಭೇದನ ಪ್ರಸಂಗದ ಕಾವ್ಯ ಭಾಗವನ್ನು ವಿವಿಧ ರಾಗಗಳಲ್ಲಿ ಪ್ರಾತ್ಯಕ್ಷಿಕೆ ನಡೆಸಿದರು. ಸುಜಯೀಂದ್ರ ಹಂದೆ ವ್ಯಾಖ್ಯಾನ ನೀಡಿದರು.
ಕಛೇರಿಯ ಪ್ರಬಂಧಕರಾದ ಶ್ರೀಧರ ಗಾಣಿಗ ಸ್ವಾಗತಿಸಿ, ಅಧ್ಯಾಪಕ ಆದಿನಾಥ ಕಿಣಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!