spot_img
Tuesday, March 31, 2026
spot_img

ಮಂದಾರ್ತಿ ಶ್ರೀ ಆದಿಸುಬ್ರಹ್ಮಣ್ಯ ದೇವಸ್ಥಾನ ಪುನರ್ ಪ್ರತಿಷ್ಠೆ

ಜನಪ್ರತಿನಿಧಿ ವಾರ್ತೆ] ಮಂದಾರ್ತಿ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಬಂಧಪಟ್ಟ ಶ್ರೀ ಆದಿಸುಬ್ರಹ್ಮಣ್ಯ ದೇವರ ನೂತನ ಶಿಲಾಮಯ ದೇವಸ್ಥಾನವನ್ನು ಸುಬ್ರಹ್ಮಣ್ಯ ಮಂಜರ ಸವಿನೆನಪಿಗಾಗಿ ದಾನಿಗಳಾದ ಶ್ರೀಮತಿ ವಿಶಾಲಾಕ್ಷಿ ಮತ್ತು ಮಕ್ಕಳು ಹಾಗೂ ಮೊಮ್ಮಕ್ಕಳು ಮಾರಣಕಟ್ಟೆ ಜೀರ್ಣೋಧ್ದಾರಗೊಳಿಸಿದ್ದು, ಪುನರ್ ಪ್ರತಿಷ್ಠಾಪನೆ ಮಹೋತ್ಸವ ಜ.31 ಶುಕ್ರವಾರದಿಂದ ಫೆ.3 ಸೋಮವಾರದ ತನಕ ನಡೆಯಲಿದೆ.

ಜ.31ರಿಂದ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿತು. ಫೆ.2ರಂದು ಬೆಳಿಗ್ಗೆ ಮಕರ ಲಗ್ನದಲ್ಲಿ ಶ್ರೀ ನಾಗದೇವರ ಪುನರ್ ಪ್ರತಿಷ್ಠೆ ನೆರವೇರಲಿದೆ. ನಂತರ ಬ್ರಹ್ಮಕಲಶ ಸ್ಥಾಪನೆ, ಆಶ್ಲೇಷಬಲಿ ನಡೆಯಲಿದೆ. ಫೆ.3 ಸೋಮವಾರ ಬೆಳಿಗ್ಗೆ ವಿವಿಧ ಧಾರ್ಮಿಕ ವಿಧಿವಿಧಾನಗಳು, ಬ್ರಹ್ಮಕಲಶಾಭಿಷೇಕ, ಸಂದರ್ಶನ, ಅನ್ನಸಂತರ್ಪಣೆ ನಡೆಯಲಿದೆ. ದೇವಳದ ವತಿಯಿಂದ ಕೃಷ್ಣಮೂರ್ತಿ ಮಂಜರಿಗೆ ಗೌರವಾರ್ಪಣೆ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!