spot_img
Wednesday, April 1, 2026
spot_img

ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿಯವರ ಹೃದಯದಲ್ಲಿರುತ್ತಾರೆ : ಅಮಿತ್‌ ಶಾ

ಜನಪ್ರತಿನಿಧಿ (ನವದೆಹಲಿ) : 2025-26ರ ಕೇಂದ್ರ ಬಜೆಟ್ ಅಭಿವೃದ್ಧಿ ಹೊಂದಿದ ದೇಶವಾಗಿ ರೂಪಿಸುವಲ್ಲಿ ಕೇಂದ್ರದ ಮೋದಿ ಸರ್ಕಾರದ ದೂರದೃಷ್ಟಿಯ ನೀಲನಕ್ಷೆಯಾಗಿದೆ ಮತ್ತು ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ನರೇಂದ್ರ ಮೋದಿಯವರ ಹೃದಯದಲ್ಲಿರುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

ರೈತರಿಂದ ಮಧ್ಯಮ ವರ್ಗದವರೆಗಿನ ಪ್ರತಿಯೊಂದು ವಿಭಾಗವನ್ನು ಮತ್ತು ಪೌಷ್ಟಿಕಾಂಶ ಮತ್ತು ಆರೋಗ್ಯ, ಸ್ಟಾರ್ಟ್‌ಅಪ್‌ಗಳಿಂದ ನಾವೀನ್ಯತೆ ಮತ್ತು ಹೂಡಿಕೆಯವರೆಗಿನ ಪ್ರತಿಯೊಂದು ವಲಯವನ್ನು ಈ ಬಜೆಟ್ ಒಳಗೊಂಡಿದೆ. ಇದು ಮೋದಿಯವರ ಸ್ವಾವಲಂಬಿ ಭಾರತಕ್ಕೆ ಮಾರ್ಗಸೂಚಿಯಾಗಿದೆ ಎಂದು ಹೇಳಿದರು.

’12 ಲಕ್ಷದವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಈ ಉದ್ದೇಶಿತ ತೆರಿಗೆ ವಿನಾಯಿತಿಯು ಮಧ್ಯಮ ವರ್ಗದವರ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವಲ್ಲಿ ಸಾಕಷ್ಟು ಸಹಾಯ ಮಾಡುತ್ತದೆ. ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು’ ‘ViksitBharatBudget2025’ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಕೇಂದ್ರ ಸಚಿವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

‘ಸಮಗ್ರ ಮತ್ತು ದೂರದೃಷ್ಟಿಯ ಬಜೆಟ್’ಗಾಗಿ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದ ಶಾ, ‘ಬಜೆಟ್ 2025 ಪ್ರತಿ ಕ್ಷೇತ್ರದಲ್ಲೂ ಅಭಿವೃದ್ಧಿ ಹೊಂದಿದ ಮತ್ತು ಅತ್ಯುತ್ತಮ ಭಾರತವನ್ನು ನಿರ್ಮಿಸುವ ಮೋದಿ ಸರ್ಕಾರದ ದೂರದೃಷ್ಟಿಯ ನೀಲನಕ್ಷೆಯಾಗಿದೆ’ ಎಂದಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!