spot_img
Sunday, February 15, 2026
spot_img

ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸಿ-ಆನಂದ ಸಿ.ಕುಂದರ್

ಕುಂದಾಪುರ: “ಸಂಪೂರ್ಣ ಸಿದ್ಧತೆಯಿಂದ ಕ್ರಮಬದ್ಧ ಅಧ್ಯಯನ ನಡೆಸಿದಲ್ಲಿ, ಯಾವ ಆತಂಕವೂ ಇಲ್ಲದೆ ಮುಕ್ತ ಮನಸ್ಸಿನಿಂದ ಬರಲಿರುವ ಪರೀಕ್ಷೆಗಳನ್ನು ಎದುರಿಸಬಹುದು; ಉತ್ತಮ ಅಂಕಗಳನ್ನು ಗಳಿಸಬಹುದು”, ಎಂದು ಮಣೂರು ಪಡುಕರೆಯ ಗೀತಾನಂದ ಫೌಂಡೇಶನ್‌ನ ಪ್ರವರ್ತಕರಾದ ಆನಂದ ಸಿ ಕುಂದರ್ ಕಿವಿಮಾತು ಹೇಳಿದರು.

ಸರಕಾರಿ ಪದವಿಪೂರ್ವ ಕಾಲೇಜು ಮಣೂರು ಪಡುಕರೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅವರು ಮಾತನಾಡುತ್ತಿದ್ದರು.

ಇದೇ ಸಂದರ್ಭದಲ್ಲಿ ಪಿಯುಸಿ ನಂತರ ಮುಂದೇನು ಎಂಬ ವಿಷಯದ ಕುರಿತು ಮಣೂರು ಪಡುಕರೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ನಾಯಕ್ ಮಾತನಾಡಿದರು.
ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದದವರು ಆನಂದ ಸಿ ಕುಂದರ್ ಅವರನ್ನು ಸನ್ಮಾನಿಸಿದರು.

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಆನಂದ ಸಿ ಕುಂದರ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು ಹಾಗೂ ಕಾಲೇಜಿಗೆ ಮೈಕ್ ಸೆಟ್‌ನ್ನು ಕೊಡುಗೆಯಾಗಿ ನೀಡಿದರು.

ನಿವೃತ್ತ ಪ್ರಾಂಶುಪಾಲ ನಾಗೇಶ್ ಶಾನುಭಾಗ್, ಕಾಲೇಜು ಶೈಕ್ಷಣಿಕ ಸಮಿತಿಯ ಸದಸ್ಯರಾದ ಜಯರಾಮ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಹೊಳ್ಳ, ಎಸ್‌ಡಿ‌ಎಂಸಿ ಅಧ್ಯಕ್ಷರಾದ ರಾಘವೇಂದ್ರ ಕಾಂಚನ್ ಮತ್ತು ನಾಗರಾಜ್ ಹಾಗೂ ಕಾಲೇಜು ಉಪನ್ಯಾಸಕರು ಶುಭ ಹಾರೈಸಿದರು. ಗೀತಾನಂದ ಫೌಂಡೇಶನ್‌ನ ಸಂಯೋಜಕರಾದ ರವಿಕಿರಣ್ ಮತ್ತು ದೀಕ್ಷಿತಾ ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಡೆನಿಸ್ ಬಾಂಜಿ ಕೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಾದ ಫಾತಿಮಾತುಲ್ ಮಿಸ್ರಿಯಾ ಮತ್ತು ಶ್ರೀಶ ಕಾರ್ಯಕ್ರಮ ನಿರೂಪಿಸಿ, ಅನುಜ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!