spot_img
Thursday, March 19, 2026
spot_img

ಉತ್ತರ ಪ್ರದೇಶದ ಶೇ. 12 ರಷ್ಟು ರೋಗಗಳಿಗೆ ಕಲುಷಿತ ಗಂಗಾ ನದಿ ನೀರು ಕಾರಣವಂತೆ : ಪ್ರಿಯಾಂಕ್‌ ಖರ್ಗೆ

ಜನಪ್ರತಿನಿಧಿ (ಬೆಂಗಳೂರು) : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಬಗ್ಗೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ʼಎಕ್ಸ್‌ʼ ನಲ್ಲಿ ಸರಣಿ ಪೋಸ್ಟ್‌  ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ‘ಉತ್ತರ ಪ್ರದೇಶದ ಶೇ. 12 ರಷ್ಟು ರೋಗಗಳಿಗೆ ಕಲುಷಿತ ಗಂಗಾ ನದಿ ನೀರು ಕಾರಣವಂತೆ’ ಎಂದು ಹೇಳಿದ್ದಾರೆ.

ಈ ಹಿಂದೆ ಕುಂಭಮೇಳದ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದರು. ಈ ಟೀಕೆ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಹಾಕುಂಭಮೇಳದಲ್ಲಿ ಪಾಲ್ಗೊಂಡು ಪವಿತ್ರ ಸ್ನಾನ ಮಾಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಮತ್ತೆ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನಾಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕಾ ಪ್ರಹಾರಗಳು ವ್ಯಕ್ತವಾಗುತ್ತಿವೆ.

ಈ ಬೆಳವಣಿಗೆ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ, ಪೋಸ್ಟ್ ಮಾಡಿ ಗಂಗಾ ನದಿ ಅತ್ಯಂತ ಕಲುಷಿತವಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಕಲುಷಿತ ನೀರಿನಲ್ಲೇ ಭಕ್ತರು ಸ್ನಾನ ಮಾಡುತ್ತಿರುವ ವಿಡಿಯೋ ಶೇರ್ ಮಾಡಿದ್ದಾರೆ. ‘ಇದು ನಾವು ಗಂಗೆಯನ್ನು ಹೇಗೆ ನಡೆಸಿಕೊಳ್ಳುತ್ತಿದ್ದೇವೆ ಎಂಬುದರ ವಾಸ್ತವ. “ನಮಾಮಿ ಗಂಗೆ” ಎಂಬುದು ಕೇವಲ ಬಜೆಟ್ ಹಂಚಿಕೆಗಳಿಗೇ ಸೀಮಿತವಾಗಿದೆ. ಕುಂಭಮೇಳವು ಚುನಾವಣಾ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.

ಅಂತೆಯೇ, ‘ಕೆಲವು ವರ್ಷಗಳ ಹಿಂದೆ ನಡೆಸಿದ ಅಧ್ಯಯನವು ಉತ್ತರ ಪ್ರದೇಶದಲ್ಲಿನ ಶೇ.12%ರಷ್ಟು ರೋಗಗಳಿಗೆ ಕಲುಷಿತ ಗಂಗಾನದಿ ನೀರು ಕಾರಣವಾಗಿದೆ ಎಂದು ಬಹಿರಂಗಪಡಿಸಿದೆ. ಗಂಗಾ ಜಲಾನಯನ ಪ್ರದೇಶವು 11 ರಾಜ್ಯಗಳನ್ನು ವ್ಯಾಪಿಸಿದ್ದು, ಭಾರತದ ಭೂಪ್ರದೇಶದ ಕಾಲು ಭಾಗವನ್ನು ಒಳಗೊಂಡಿದೆ. ಇದು ಭಾರತದ ಬಡ ಸಮುದಾಯಗಳಲ್ಲಿ ಮೂರನೇ ಎರಡರಷ್ಟು ಸೇರಿದಂತೆ ದೇಶದ ಜನಸಂಖ್ಯೆಯ 40% ಕ್ಕಿಂತ ಹೆಚ್ಚು ಜನರಿಗೆ ಬೆಂಬಲ ನೀಡುತ್ತದೆ. ಹೆಚ್ಚುವರಿಯಾಗಿ, ಇದು ಭಾರತದ ಮೇಲ್ಮೈ ನೀರಿನ 1/3 ಕ್ಕಿಂತ ಹೆಚ್ಚು ನೀರು ಪೂರೈಸುತ್ತದೆ ಮತ್ತು ದೇಶದ ಅತಿದೊಡ್ಡ ನೀರಾವರಿ ಪ್ರದೇಶವನ್ನು ಒಳಗೊಂಡಿದೆ. ಆದಾಗ್ಯೂ ಈ ರೀತಿಯಾಗಿ ನಾವು ನಮ್ಮ ಜೀವಸೆಲೆಯನ್ನು ರಕ್ಷಿಸುತ್ತಿದ್ದೇವೆ’ ಎಂದು ಆಕ್ರೋಶ ಹೊರ ಹಾಕಿದ್ದಾರೆ. ‌

https://x.com/PriyankKharge/status/1888644887220023457

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!