spot_img
Saturday, February 14, 2026
spot_img

ಮುಡಾ ಹಗರಣ : ಅಂತಿಮ ವರದಿ ಸಲ್ಲಿಸಲು ಸಮಯಾವಕಾಶ ಕೇಳಿದ ಲೋಕಾಯುಕ್ತ !

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾ  (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಅಕ್ರಮ ನಿವೇಶನ ಹಂಚಿಕೆಯ ಆರೋಪದ ಮೇಲೆ ತನಿಖೆ ನಡೆಸುತ್ತಿರುವ ರಾಜ್ಯ ಲೋಕಾಯುಕ್ತ ಪೊಲೀಸರು ತಮ್ಮ ಅಂತಿಮ ವರದಿ ಸಲ್ಲಿಸಲು ನ್ಯಾಯಾಲಯದಿಂದ ಹೆಚ್ಚಿನ ಕಾಲಾವಕಾಶವನ್ನು ಕೇಳಿದ್ದಾರೆ.

ಮನವಿಯನ್ನು ಪರಿಗಣಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿದ್ದಾರೆ.

ಲೋಕಾಯುಕ್ತ ಎಡಿಜಿಪಿ ಎ. ಸುಬ್ರಮಣ್ಯೇಶ್ವರ ರಾವ್ ಅವರು ವರದಿಯನ್ನು ಪರಿಶೀಲಿಸುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಪರವಾಗಿ ವಾದಿಸಿದ ವಕೀಲರು, ತಾಂತ್ರಿಕ ಕಾರಣಗಳಿಂದಾಗಿ ಸಲ್ಲಿಕೆಗೆ ಹೆಚ್ಚುವರಿ ಸಮಯವನ್ನು ಕೋರಿದರು.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಹೈಕೋರ್ಟ್ ಪೀಠದ ನಿರ್ದೇಶನದ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ್ ಅವರು ಫೆಬ್ರವರಿ 13 ರಂದು ಲೋಕಾಯುಕ್ತ ಎಡಿಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರಿಗೆ ಮುಡಾ ಹಗರಣದ ವರದಿಯನ್ನು ಸಲ್ಲಿಸಿದ್ದರು.

ಮುಡಾ ಹಗರಣದ ಅಂತಿಮ ವರದಿಯು ಐದು ಸಂಪುಟಗಳಲ್ಲಿ 550 ಪುಟಗಳನ್ನು ಒಳಗೊಂಡಿದೆ. ಲೋಕಾಯುಕ್ತದ ಕಾನೂನು ಘಟಕ ವರದಿಯನ್ನು ಪರಿಶೀಲಿಸಿ ಚಾರ್ಜ್‌ಶೀಟ್ ಸಲ್ಲಿಸಬೇಕೆ ಅಥವಾ ಮುಕ್ತಾಯ ವರದಿಯನ್ನು ಸಲ್ಲಿಸಬೇಕೆ ಎಂದು ನಿರ್ಧರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ಮುಡಾ 14 ನಿವೇಶನಗಳ ಹಂಚಿಕೆಯಲ್ಲಿ ಯಾವುದೇ ರಾಜಕೀಯ ಪ್ರಭಾವ ಕಂಡುಬಂದಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!