spot_img
Friday, March 21, 2025
spot_img

ಹಿಜಾಣ ಸ.ಕಿ.ಪ್ರಾ.ಶಾಲೆಯಲ್ಲಿ ವಂಡ್ಸೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಕುಂದಾಪುರ, ಫೆ.19: ಚಿತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.19 ರಂದು ವಂಡ್ಸೆ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಚಿತ್ತೂರು ಅಧ್ಯಕ್ಷ ರವಿರಾಜ ಶೆಟ್ಟಿ ಇವರ ಸಮ್ಮುಖದಲ್ಲಿ ಎಲ್ಲಾ ಶಾಲಾ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿನಾಯಕಿ ಸಾನ್ವಿತಾರೊಡಗೂಡಿ ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷೆ ಮೂಕಾಂಬು ವಹಿಸಿದ್ದರು.
ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷೆ ಸುಬ್ಬು, ಪಂಚಾಯತ್ ಸದಸ್ಯರಾದ ಮಂಜುನಾಥ ದೇವಾಡಿಗ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಮೇಶ್ ಆಚಾರ್ಯ, ಇಲಾಖಾ ಪ್ರತಿನಿಧಿಗಳಾಗಿ ಸಿ‌ಆರ್ ಪಿಗಳಾದ ರವಿಚಂದ್ರ, ಶೈಲಜಾ ಮತ್ತು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ದಿನೇಶ್ ಬೆಳಕಲ್, ಸವಿತಾ ಮುದೂರು, ಪ್ರಸನ್ನ ಕೊಲ್ಲೂರು, ಅಂಗನವಾಡಿ ಶಿಕ್ಷಕಿಯಾದ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.
ವಂಡ್ಸೆ ಸಮೂಹ ಸಮೂಹ ಸಂಪನ್ಮೂಲ ವ್ಯಕ್ತಿ ಎಂ. ನಾಗರಾಜ ಶೆಟ್ಟಿ ಸ್ವಾಗತಿಸಿದರು. ಹೊಸಾಡು ಕ್ಲಸ್ಟರ್ ಸಿ.ಆರ್.ಪಿ ಸತೀಶ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮವನ್ನು ಚಿತ್ತೂರು ಶಾಲೆಯ ಸಹಶಿಕ್ಷಕ ಗುರುಪ್ರಸಾದ್ ನಿರ್ವಹಿಸಿದರು. ಮುಖ್ಯಶಿಕ್ಷಕರಾದ ರಾಘವೇಂದ್ರ ನಾಯಕ್ ವಂದಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಅತಿಥಿ ಶಿಕ್ಷಕಿ ಸ್ವಾತಿ ಮತ್ತು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳಾದ ಉದಯ ಬಳಗಾರ ಮತ್ತು ಇಂದಿರಾ ಮತ್ತು ಗಣೇಶ್ ಸಹಕರಿಸಿದರು. ಬೇರೆ ಬೇರೆ ಶಾಲೆಯಿಂದ ಬಂದ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!