spot_img
Saturday, February 14, 2026
spot_img

ಬಿ. ಬಿ. ಹೆಗ್ಡೆ ಕಾಲೇಜು : ಪೂರ್ವ ಉದ್ಯೋಗ ನೇಮಕಾತಿ’ ಕುರಿತು ಉಪನ್ಯಾಸ ಕಾರ್ಯಕ್ರಮ

 

ಜನಪ್ರತಿನಿಧಿ (ಕುಂದಾಪುರ) : ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ (MSDC) ವತಿಯಿಂದ ಡಾ. ಬಿ. ಬಿ. ಹೆಗ್ಡೆ ಪದವಿ ಕಾಲೇಜಿನಲ್ಲಿ ‘ಪೂರ್ವ ಉದ್ಯೋಗ ನೇಮಕಾತಿ’ ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಭವಿಷ್ಯದ ನೇಮಕಾತಿ ಅವಕಾಶಗಳಿಗಾಗಿ ಅಗತ್ಯ ಜ್ಞಾನ ಮತ್ತು ಕೌಶಲ್ಯಗಳನ್ನು ಕಲ್ಪಿಸುವ ಉದ್ದೇಶವನ್ನು ಹೊಂದಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಣಿಪಾಲ IT ಕೌಶಲ್ಯಗಳ ಕೇಂದ್ರ ಮುಖ್ಯಸ್ಥೆ ಶ್ರೀಮತಿ ರಾಜಲಕ್ಷ್ಮಿ ಅವರು ಉತ್ತಮವಾಗಿ ರಚಿಸಲಾದ CVಯ ಮಹತ್ವ ಮತ್ತು ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಒಳಗೊಳ್ಳಬೇಕಾದ ಮುಖ್ಯ ವಿಷಯಗಳ ಬಗ್ಗೆ ಅಮೂಲ್ಯವಾದ ಮಾಹಿತಿ ಒದಗಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಅವರ ಭವಿಷ್ಯದ ನೇಮಕಾತಿ ಪ್ರಕ್ರಿಯೆಗಳಿಗಾಗಿ ಶುಭ ಹಾರೈಸಿದರು.

ಡಾ. ಟಿ. ಎಂ. ಎ. ಪೈ ಪಾಲಿಟೆಕ್ನಿಕ್‌ನ ಪ್ರಾಂಶುಪಾಲರಾದ ಡಾ| ಕಾಂತರಾಜ್ ಅವರು ಗೌರವಾನ್ವಿತ ಅತಿಥಿಯಾಗಿ ಹಾಗೂ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರು ಮತ್ತು ಸಹ ಪ್ರಾಧ್ಯಾಪಕರಾದ ಮಹೇಶ್ ಕುಮಾರ್  ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಗಣಕ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ   ರಶ್ಮಿ ಗಾವಡಿ ಸ್ವಾಗತಿಸಿದರು. ವೃತ್ತಿ ಮಾರ್ಗದರ್ಶನ ಘಟಕದ ಅಧಿಕಾರಿ ತಿಮ್ಮಪ್ಪ ಡಿ.ಎಸ್. ವಂದಿಸಿದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!