spot_img
Saturday, February 14, 2026
spot_img

ಕರಾವಳಿಯ ಪ್ರವಾಸೋದ್ಯಮ ಹಿನ್ನಡೆಗೆ ಬಿಜೆಪಿ ಜನಪ್ರತಿನಿಧಿನಗಳೆ ಕಾರಣ-ಕೆ.ವಿಕಾಸ್ ಹೆಗ್ಡೆ

ಕುಂದಾಪುರ: ಕರಾವಳಿಯ ಪ್ರವಾಸೋದ್ಯಮ ಹಿನ್ನಡೆಗೆ ಬಿಜೆಪಿ ಜನಪ್ರತಿನಿಧಿನಗಳೆ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ತಿಳಿಸಿದ್ದಾರೆ.

ಸಾಮಾಜಿಕ, ಶೈಕ್ಷಣಿಕ, ಆರೋಗ್ಯ, ನೈರ್ಮಲ್ಯ, ಬ್ಯಾಂಕಿಂಗ್ ಇತ್ಯಾದಿ ಎಲ್ಲಾ ರಂಗಗಳಲ್ಲಿ ಅತ್ಯಂತ ಮುಂಚೂಣಿಯಲ್ಲಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವತ್ತು ಹಿನ್ನಡೆಯನ್ನು ಕಾಣಲು ಇಲ್ಲಿನ ಬಿಜೆಪಿ ಜನಪ್ರತಿನಿಧಿಗಳು ಕೊಡುಗೆ ದೊಡ್ಡದು. ಚುನಾವಣೆಯ ಗೆಲುವಿಗಾಗಿ ಭಾವನಾತ್ಮಕ ವಿಚಾರಗಳನ್ನು ಮುಂದೆ ಇಟ್ಟು ಧರ್ಮ ಧರ್ಮದ ನಡುವೆ, ಜಾತಿ ಜಾತಿಯ ನಡುವೆ ವಿಷ ಬೀಜಬಿತ್ತಿ ಕೋಮು ಸೌಹಾರ್ದತೆ ಹಾಳಾದ ಕಾರಣ ಪ್ರವಾಸೋದ್ಯಮ, ಇನ್ನಿತರ ಹೂಡಿಕೆಗೆ ಜನ ಹಿಂಜರಿಯುತ್ತಿರುವ ಕಾರಣ ಕರಾವಳಿ ಜಿಲ್ಲೆಗಳು ಉದ್ಯಮ, ಉದ್ದಿಮೆಗಳಲ್ಲಿ ಹಿನ್ನಡೆ ಅನುಭವಿಸುತ್ತಿವೆ. ಇವತ್ತು ಪ್ರವಾಸೋದ್ಯಮದಲ್ಲಿ ಕರ್ನಾಟಕ ಕರಾವಳಿಗಿಂತ ಗೋವಾ ಮತ್ತು ಕೇರಳ ಅಭಿವೃದ್ಧಿಯನ್ನು ಹೊಂದಿವೆ. ಆದರೆ ಕೇರಳ ಮತ್ತು ಗೋವಾದಷ್ಟೇ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶ ಕರ್ನಾಟಕ ಕರಾವಳಿಯಲ್ಲಿ ಇದೆ, ಆದರೆ ಇಲ್ಲಿನ ಜನಪ್ರತಿನಿದಿನಗಳ ಇಚ್ಛಾಶಕ್ತಿಯ ಕೊರತೆಯಿಂದ ನಾವು ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಇತ್ಯಾದಿಗಳ ಪ್ರಗತಿಯಲ್ಲಿ ಹಿನ್ನಡೆಯನ್ನು ಕಾಣುತ್ತಿದ್ದೇವೆ. ಇವತ್ತು ರಾಜ್ಯದ ಉಪಮುಖ್ಯಮಂತ್ರಿಗಳು ಕರಾವಳಿ ಜಿಲ್ಲೆಗಳ ಪ್ರವಾಸೋದ್ಯಮ ಹಾಗೂ ಇತರೆ ಅಭಿವೃದ್ಧಿ ವಿಚಾರಗಳ ಬಗ್ಗೆ ವಿಶೇಷ ಚರ್ಚೆಗೆ ಅವಕಾಶ ನೀಡುವ ವಿಚಾರ ಪ್ರಸ್ತಾಪ ಮಾಡಿದ್ದು ಕರಾವಳಿ ಜಿಲ್ಲೆಗಳ ಆರ್ಥಿಕ, ಔದ್ಯೋಗಿಕ ಅಭಿವೃದ್ಧಿಗೆ ಒಂದು ಉತ್ತಮ ಕೊಡುಗೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!