spot_img
Thursday, April 2, 2026
spot_img

ರಾಜ್ಯ ಸಭೆಯಲ್ಲಿ ಅಸಂಸದೀಯ ಹೇಳಿಕೆ : ಕ್ಷಮೆ ಯಾಚಿಸಿದ ಮಲ್ಲಿಕಾರ್ಜುನ್‌ ಖರ್ಗೆ

ಜನಪ್ರತಿನಿಧಿ (ನವ ದೆಹಲಿ) : ರಾಜ್ಯಸಭಾ ಕಲಾಪದ ಸಂದರ್ಭದಲ್ಲಿ ಉಪಸಭಾಪತಿ ಹರಿವಂಶ್ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹರಿಹಾಯ್ದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (ಕ್ಷಮೆ ಕೇಳಿದ್ದಾರೆ.

ಆಡಳಿತ ಪಕ್ಷದ ಸದಸ್ಯರ ವಿರೋಧದ ಬಳಿಕ ಅವರು ಕ್ಷಮೆ ಕೇಳಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಲು ಬಯಸಿದ್ದ ಖರ್ಗೆ ಅವರಿಗೆ ಮಾತನಾಡಲು ಉಪಸಭಾಪತಿ ಹರಿವಂಶ್ ಅವಕಾಶ ನೀಡಲಿಲ್ಲ. ಇದಕ್ಕೆ ಆಕ್ರೋಶಗೊಂಡ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಏಕಾಏಕಿ ಎದ್ದು ಸದನದಲ್ಲಿ ಮಾತನಾಡಲು ಪ್ರಾರಂಭಿಸಿದ್ದರು. ಇದಕ್ಕೆ ಉಪಸಭಾಪತಿ ಹರಿವಂಶ್ ವಿರೋಧ ವ್ಯಕ್ತಪಡಿಸಿದ್ದರು. ದೇಶದಲ್ಲಿ ಸರ್ವಾಧಿಕಾರ ನಡೆದಿದೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯಸಭಾ ಪೀಠಾಧ್ಯಕ್ಷರ ಪೀಠದ ಕಡೆ ಬೆರಳು ಮಾಡಿ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ನಾವು ಮಾತನಾಡಲು ತಯಾರಿ ಮಾಡಿಕೊಂಡು ಬಂದಿದ್ದೇವೆ. ಆದರೆ, ನೀವು ಬೇರೆ ಏನೋ ಬಯಸುತ್ತಿದ್ದೀರಿ ಎಂದು ಖರ್ಗೆ ಆಕ್ರೋಶ ಹೊರಹಾಕಿದ್ದರು. ಆದರೆ, ಖರ್ಗೆ ಮಾತಿಗೆ ಉಪಸಭಾಪತಿ ಹರಿವಂಶ್ ಹಾಗೂ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಅಸಾಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆಡಳಿತ ಪಕ್ಷ ಗದ್ದಲ ಮಾಡಿದ್ದರು. ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ಖರ್ಗೆ ಕ್ಷಮೆ ಕೇಳಿದ್ದಾರೆ.

ಖರ್ಗೆ ಅವರ ಹೇಳಿಕೆಗಳನ್ನು ಬಿಜೆಪಿ ಮುಖ್ಯಸ್ಥ ಮತ್ತು ಸದನದ ನಾಯಕ ಜೆ.ಪಿ. ನಡ್ಡಾ ಖಂಡಿಸಿದ್ದಾರೆ. ಖರ್ಗೆ ಅವರು “ಕ್ಷಮಿಸಲಾಗದ” ಹೇಳಿಕೆ ನೀಡಿದ್ದಾರೆ. ಅವರು ಕ್ಷಮೆ ಯಾಚಿಸಬೇಕು ಮತ್ತು ಆ ಅಸಾಂವಿಧಾನಿಕ ಪದವನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

“ದೇಶದಲ್ಲಿ ಪ್ರಾದೇಶಿಕ ವಿಭಜನೆ ಸೃಷ್ಟಿಸಿದ್ದಕ್ಕಾಗಿ ಬಿಜೆಪಿಯನ್ನು ಟೀಕಿಸಲು ಉದ್ದೇಶಿಸಿದ್ದೇನೆಯೇ ವಿನಃ ಉಪ ಸಭಾಪತಿಯನ್ನು ಉದ್ದೇಶಿಸಿ ನಾನು ಆ ಮಾತನ್ನು ಹೇಳಲಿಲ್ಲ” ಎಂದು ಹೇಳುವ ಮೂಲಕ ಮಲ್ಲಿಕಾರ್ಜುನ ಖರ್ಗೆ ತಕ್ಷಣ ಕ್ಷಮೆಯಾಚಿಸಿದರು. ರಾಜ್ಯಸಭೆಯು ಶಿಕ್ಷಣ ಸಚಿವಾಲಯದ ಕಾರ್ಯವೈಖರಿಯ ಕುರಿತು ಚರ್ಚೆಯನ್ನು ಪ್ರಾರಂಭಿಸಿದಾಗ ಮತ್ತು ವಿರೋಧ ಪಕ್ಷದ ನಾಯಕರು ಎನ್‌ಇಪಿ ಕುರಿತು ತಮಿಳುನಾಡು ಸರ್ಕಾರದ ಕುರಿತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸೋಮವಾರ ನೀಡಿದ ಹೇಳಿಕೆಗಳನ್ನು ಖಂಡಿಸಿದಾಗ ಈ ಘಟನೆ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!