spot_img
Sunday, February 15, 2026
spot_img

ನಟಿ ಸೌಂದರ್ಯ ಸಾವು ಆಕಸ್ಮಿಕವಲ್ಲ, ಕೊಲೆ ! : ತೆಲುಗು ನಟ ಮೋಹನ್ ಬಾಬು ವಿರುದ್ಧ ಗಂಭೀರ ಆರೋಪ

ಜನಪ್ರತಿನಿಧಿ (ಆಂಧ್ರ ಪ್ರದೇಶ) :  ಕನ್ನಡದ ನಟಿ ಸೌಂದರ್ಯ ವಿಮಾನ ಅಪಘಾತದಲ್ಲಿ ಸಾವಿಗೀಡಾಗಿ ಎರಡು ದಶಕಗಳೇ ಕಳೆದಿವೆ. ಆದರೆ, ಈ ಸಂಬಂಧಿಸಿದಂತೆ ಈಗ ಹಿರಿಯ ತೆಲುಗು ನಟ ಮೋಹನ್ ಬಾಬು ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಆಂಧ್ರಪ್ರದೇಶದ ಖಮ್ಮಮ್ ಜಿಲ್ಲೆಯಲ್ಲಿ ದೂರು ದಾಖಲಾಗಿದ್ದು, ನಟಿಯ ಅಕಾಲಿಕ ಸಾವು ಆಕಸ್ಮಿಕವಲ್ಲ, ಬದಲಾಗಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಾಡಿರುವ ಕೊಲೆ ಎಂದು ಆರೋಪಿಸಲಾಗಿದೆ.

ಶಂಶಾಬಾದ್‌ನ ಹಳ್ಳಿಯೊಂದರಲ್ಲಿದ್ದ ಆರು ಎಕರೆ ಜಮೀನನ್ನು ಮಾರಾಟ ಮಾಡುವಂತೆ ಸೌಂದರ್ಯ ಮತ್ತು ಅವರ ಸಹೋದರನ ಮೇಲೆ ಮೋಹನ್ ಬಾಬು ಒತ್ತಡ ಹೇರಿದ್ದರು. ಆದರೆ, ಅವರು ಇದಕ್ಕೆ ನಿರಾಕರಿಸಿದರು. ಇದರಿಂದ ಇಬ್ಬರ ನಡುವೆ ಸಂಘರ್ಷ ಉಂಟಾಗಿತ್ತು. ಸೌಂದರ್ಯ ಅವರ ಮರಣದ ನಂತರ, ಮೋಹನ್ ಬಾಬು ಅವರು ಬಲವಂತವಾಗಿ ಆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ದೂರುದಾರ ಚಿಟ್ಟಿಮಲ್ಲು ಆರೋಪಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ದೂರುದಾರರು ಈ ಇಬ್ಬರು ನಟರೊಂದಿಗೆ ಹೇಗೆ ಸಂಬಂಧ ಹೊಂದಿದ್ದಾರೆ ಎಂಬುದು ತಿಳಿದಿಲ್ಲ.

ಕನ್ನಡದ ಜನಪ್ರಿಯ ನಟಿ ಸೌಂದರ್ಯ, 1999ರಲ್ಲಿ ತೆರೆಕಂಡ ಅಮಿತಾಬ್ ಬಚ್ಚನ್ ಅಭಿನಯದ ‘ಸೂರ್ಯವಂಶಂ’ ಚಿತ್ರದಲ್ಲಿ ರಾಧಾ ಪಾತ್ರವನ್ನು ನಿರ್ವಹಿಸಿದ್ದರು. ಅವರು ಮತ್ತು ಅವರ ಸಹೋದರ ಏಪ್ರಿಲ್ 17 ರಂದು ರಾಜಕೀಯ ಕಾರ್ಯಕ್ರಮಕ್ಕಾಗಿ ಕರೀಂನಗರಕ್ಕೆ ಪ್ರಯಾಣಿಸುತ್ತಿದ್ದಾಗ ಅವರ ಖಾಸಗಿ ಜೆಟ್ ಅಪಘಾತಕ್ಕೀಡಾಗಿ ನಿಧನರಾದರು. ಅವರಿಗೆ 31 ವರ್ಷ ವಯಸ್ಸಾಗಿತ್ತು ಮತ್ತು ಆ ಸಮಯದಲ್ಲಿ ಅವರು ಗರ್ಭಿಣಿಯಾಗಿದ್ದರು. ಅಪಘಾತದ ಸ್ಥಳದಿಂದ ಅವರ ದೇಹವನ್ನು ಪಡೆಯಲು ಸಾಧ್ಯವಾಗಲಿಲ್ಲ.

ಭೂ ಕಬಳಿಕೆಯಲ್ಲಿ ಮೋಹನ್ ಬಾಬು ಪಾತ್ರದ ಬಗ್ಗೆ ಹೊಸದಾಗಿ ತನಿಖೆ ನಡೆಸಬೇಕೆಂದು ಮತ್ತು ಅವರಿಂದ ಭೂಮಿಯನ್ನು ವಶಪಡಿಸಿಕೊಳ್ಳುವಂತೆ ದೂರುದಾರರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಖಮ್ಮಂ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಮತ್ತು ಜಿಲ್ಲಾ ಅಧಿಕಾರಿಗೆ ದೂರು ನೀಡಿದ್ದಾರೆ. ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿದ್ದಾರೆ.

ಚಿಟ್ಟಿಮಲ್ಲು ತಮ್ಮ ದೂರಿನಲ್ಲಿ, ಮೋಹನ್ ಬಾಬು ಮತ್ತು ಅವರ ಕಿರಿಯ ಮಗ ಮಂಚು ಮನೋಜ್ ನಡುವಿನ ಆಸ್ತಿ ವಿವಾದವನ್ನು ಸಹ ಉಲ್ಲೇಖಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!