spot_img
Wednesday, April 1, 2026
spot_img

ರಾಜ್ಯ ಸರ್ಕಾರದ ಗೌರವವನ್ನು ಸಚಿವರೇ ಹಾಳು ಮಾಡುತ್ತಿದ್ದಾರೆ : ಸದನದಲ್ಲಿ ಸಚಿವರ ಅನುಪಸ್ಥಿತಿಗೆ ಖಾದರ್‌ ಅಸಮಧಾನ

ಜನಪ್ರತಿನಿಧಿ (ಬೆಂಗಳೂರು) : ಸದನದಲ್ಲಿ ಸಚಿವರ ಗೈರುಹಾಜರಿಯಿಂದ ಗರಂ ಆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಅವರು ಸಚಿವರೇ ರಾಜ್ಯ ಸರ್ಕಾರದ ಗೌರವವನ್ನು ಹಾಳು ಮಾಡುತ್ತಿದ್ದಾರೆ ಎಂದು ಇಂದು(ಮಂಗಳವಾರ) ಅಸಮಧಾನ ವ್ಯಕ್ತ ಪಡಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ವಿಧಾನಸಭಾ ಅಧಿವೇಶಕ್ಕೆ ಹಾಜರಾಗಲು ಮತ್ತು ಚರ್ಚೆಗಳಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೆ ಏಕೆ ಸಚಿವರಾಗಬೇಕು?, ಸರ್ಕಾರದ ಪರವಾಗಿ ಶಾಸಕರ ಪ್ರಶ್ನೆಗಳಿಗೆ ಉತ್ತರ ನೀಡಲಾಗದಿದ್ದರೆ ಏಕೆ ಮಂತ್ರಿಯಾಗಬೇಕು? ಎಂದು ಸ್ಪೀಕರ್ ಖಾರವಾಗಿಯೇ ಪ್ರಶ್ನಿಸಿದ್ದಾರೆ.

ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕಾನೂನು ಮತ್ತು ಸುವ್ಯವಸ್ಥೆ ವಿಷಯ ಪ್ರಸ್ತಾಪಿಸುತ್ತಾ, ಸದನದಲ್ಲಿ ಸಚಿವರಿಲ್ಲ, ಇದ್ದ ಒಬ್ಬ ಸಚಿವರು ಎದ್ದು ಹೊರ ನಡೆದಿದ್ದಾರೆ. ʼಒಬ್ಬಳೇ ಪದ್ಮಾವತಿʼ ಎನ್ನುವಂತಾಗಿದೆ ಎಂದು ವ್ಯಂಗ್ಯವಾಡಿದರು.

ಈ ಸಂದರ್ಭ ಬೇಸರ ವ್ಯಕ್ತಪಡಿಸಿ ಮಾತನಾಡಿದ ಸ್ಪೀಕರ್, ಸಚಿವರು ಸದನದಲ್ಲಿ ಹಾಜರಿರಬೇಕು, ಅವರ ಗೈರುಹಾಜರಿಯನ್ನು ಯಾರೂ ಸಹಿಸುವುದಿಲ್ಲ. ಸಚಿವರು ಈ ಸರ್ಕಾರದ ಘನತೆಯನ್ನು ಕುಗ್ಗಿಸುತ್ತಿದ್ದಾರೆ. ಉತ್ತಮ ಕೆಲಸಗಳ ಹೊರತಾಗಿಯೂ, ಸಚಿವರು ಸಮಯಕ್ಕೆ ಸರಿಯಾಗಿ ಸದನಕ್ಕೆ ಬಾರದೇ ಸರ್ಕಾರದ ಗೌರವವನ್ನು ತೆಗೆಯುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಪ್ರತಿಪಕ್ಷದವರು ಹೇಳುವುದು ತಪ್ಪೆಂದು ಹೇಳುತ್ತಿಲ್ಲ. ಸದನದಲ್ಲಿ ಸಚಿವರು ಇರಬೇಕೆಂದು ಅವರು ಕೇಳುವುದು ಸರಿಯಿದೆ. ಮುಖ್ಯಮಂತ್ರಿ ಇದ್ದಾಗ ಎಲ್ಲಾ ಸಚಿವರೂ ಬರುತ್ತಾರೆ. ಅವರಿಲ್ಲದಿದ್ದಾಗಲೂ ಎಲ್ಲಾ ಸಚಿವರಿರಬೇಕು. ಮುಖ್ಯಮಂತ್ರಿ ಬೆಂಬಲಕ್ಕೆ ಸಚಿವರು ನಿಲ್ಲುವುದು ಬೇಕಾಗಿಲ್ಲ. ಅವರು ಸಮರ್ಥಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

“ಈ ಸರ್ಕಾರವನ್ನು ಪ್ರಶ್ನಿಸಲು ಸದನದಲ್ಲಿ ಯಾರಿದ್ದಾರೆ? ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪ್ರಶ್ನಿಸಲು ಯಾರೂ ಇಲ್ಲ, ಸ್ಪೀಕರ್ ಮುಂದೆ ಬಂದು ನಮ್ಮನ್ನು ರಕ್ಷಿಸಬೇಕು, ನೀವು (ಸ್ಪೀಕರ್) ಅಸಹಾಯಕರಾಗಬಾರದು” ಎಂದು ಆರ್ ಅಶೋಕ್ ಹೇಳಿದರು.

ಬಿಜೆಪಿ ಶಾಸಕ ಸುನೀಲ್‌ ಕುಮಾರ್ ಮಾತನಾಡಿ, ಕಾರ್ಯಸೂಚಿ ಪ್ರಕಾರ ಸದನ ನಡೆಸಲು ತಕರಾರಿಲ್ಲ. ಕಾನೂನು ಮತ್ತು ಸುವ್ಯವಸ್ಥೆ ವಿಚಾರ ಗಂಭೀರವಾಗಿದ್ದು, ಅದಕ್ಕೆ ಅವಕಾಶ ಮಾಡಿಕೊಡಬೇಕು. ರಾಜ್ಯದಲ್ಲಿ ಭಯದ ವಾತಾವರಣವಿದೆ. ಹಲವು ಘಟನೆಗಳು ರಾಜ್ಯದಲ್ಲಿ ಘಟಿಸಿವೆ. ಅದರ ಪ್ರಸ್ತಾಪವಾಗಬೇಕು ಎಂದು ಆಗ್ರಹಿಸಿದರು.

ಇದಕ್ಕು ಮುನ್ನ ಸದನದಲ್ಲಿ ಸಚಿವರಿಲ್ಲ ಎಂಬ ಆಕ್ಷೇಪವನ್ನು ಬಿಜೆಪಿ ಶಾಸಕರು ಪ್ರಸ್ತಾಪಿಸಿದರು. ಆಗ ಮಧ್ಯಪ್ರವೇಶಿಸಿದ ಸ್ಪೀಕರ್, ಸದನದಲ್ಲಿ ಇಂದು ಹಾಜರಿ ರಬೇಕಾದ ಸಚಿವರುಗಳ ಹೆಸರುಗಳನ್ನು ಉಲ್ಲೇಖಿಸಿದರು. ಸಚಿವರಾದ ಕೆ.ಎಚ್‌.ಮುನಿಯಪ್ಪ, ಕೆ.ಜೆ.ಜಾರ್ಜ್‌, ದಿನೇಶ್‌ ಗುಂಡೂರಾವ್‌, ಕೃಷ್ಣಭೈರೇಗೌಡ, ಡಾ.ಎಚ್‌.ಸಿ.ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಜಮೀರ್‌ ಅಹಮದ್‌ ಖಾನ್‌, ಈಶ್ವರ್‌ ಖಂಡ್ರೆ ಸೇರಿದಂತೆ ಸದನಕ್ಕೆ ಗೈರು ಆಗಿದ್ದ ಸಚಿವರ ಹೆಸರುಗಳನ್ನು ವಾಚಿಸಿ ಮೂವರು ಸಚಿವರು ಮಾತ್ರ ಸದನದಲ್ಲಿ ಹಾಜರಿದ್ದಾರೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!