spot_img
Saturday, February 14, 2026
spot_img

ಕುಂದಾಪುರ: ಭಂಡಾರ್ಕಾಸ್ ಕಾಲೇಜು ವಾರ್ಷಿಕೋತ್ಸವ

ಕುಂದಾಪುರ: ಭಾರತವು 21ನೇ ಶತಮಾನದಲ್ಲಿ ಅಭಿವೃದ್ಧಿಪರ ಕನಸನ್ನು ಸಾಕಾರಗೊಳಿಸುವತ್ತ ಸಾಗುತ್ತಿದೆ. ಈ ದಿಸೆಯಲ್ಲಿ ನಮ್ಮ ಪ್ರಯತ್ನವಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಎಮ್.ಎಸ್.ಜಯಕರ ಶೆಟ್ಟಿ ಹೇಳಿದರು.

ಅವರು ಮಾ.22 ರಂದು ನಡೆದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ದಿನಗಳ ಕಾಲ ನಡೆಯುತ್ತಿರುವ ಕಾಲೇಜು ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಈಗ ಕೆಲಸ ಬೇಕು ಅಂದ್ರೆ 21ನೇ ಶತಮಾನ ಬಯಸುವ ಶಿಕ್ಷಣ ಬೇಕು. ಅಂದರೆ ಉದ್ಯೋಗ ಆಧಾರಿತ ಕೌಶಲ್ಯ ಆಧಾರಿತ ಶಿಕ್ಷಣದ ಅಗತ್ಯವಿದೆ. ಈ ಶತಮಾನ ಭಾರತೀಯವಾಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ನಮ್ಮ ದೇಶದಲ್ಲಿ ಕೌಶಲ್ಯ ಆಧಾರಿತ ಶಿಕ್ಷಣದ ಬೆಳವಣಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ಸಹಾಯ ನೀಡುತ್ತಿದೆ ಎಂದು ಹೇಳಿದರು.

ಉದ್ಯೋಗ ಮತ್ತು ಬದುಕಲ್ಲಿ ಯಶಸ್ಸು ಪಡೆಯಬೇಕಾದರೆ ಉತ್ತಮ ಸಂವಹನ ಕಲೆ , ವಿವಿಧ ಭಾಷಾ ಜ್ಞಾನ, ಕಂಪ್ಯೂಟರ್ ಜ್ಞಾನ, ಸಮಸ್ಯೆ ಪರಿಹಾರ, ಸಹಯೋಗದ ಭಾಗವಹಿಸುವಿಕೆ, ಅಂತರ್ ಸಂವಹನ ಕಲೆ ಇತರೆ ಕೌಶಲ್ಯಗಳು ನಾವು ಕೆಲಸ ಪಡೆಯಲು ಮತ್ತು ಕೊಡುವ ಹಂತಕ್ಕೆ ಬೆಳೆಯಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚೆಗೆ ಭಾರತದ ಶಿಕ್ಷಣ ಪದ್ಧತಿ ವಿಶ್ವದ ಎಲ್ಲಾ ದೇಶಗಳಲ್ಲಿಯೂ ಆರಂಭವಾಗುತ್ತಿದೆ. ಭಾರತೀಯ ಶಿಕ್ಷಣ ವ್ಯವಸ್ಥೆಯ ಉನ್ನತ ಶಿಕ್ಷಣ ವಿಶ್ವಕ್ಕೆ ಮಾದರಿಯಾಗಿದೆ. ಮಣಿಪಾಲ ಶಿಕ್ಷಣ ಸಂಸ್ಥೆಗಳು ವಿಶ್ವದ ಎಲ್ಲಾ ರಾಷ್ಟ್ರಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದೆ ಎಂದರೆ ಸಂಸ್ಥೆಯ ಸಂಸ್ಥಾಪಕ ಟಿ.ಎಮ್.ಎ.ಪೈ ಅವರು ದೂರದೃಷ್ಟಿಯೇ ಅದಕ್ಕೆ ಕಾರಣ. ಅಂತೆಯೇ ನಮ್ಮ ಭಂಡಾರ್ಕಾರ್ಸ್ ಕಾಲೇಜು ಮತ್ತು ಇಲ್ಲಿನ ಸೌಲಭ್ಯಗಳು ಯಾವುದೇ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆ ಇಲ್ಲ ಅಲ್ಲದೇ ಶಿಕ್ಷಣ ಒಟ್ಟಾರೆ ಲ್ಯಾಂಡ್ ಸ್ಕೇಪ್ ಬದಲಾಗುತ್ತದೆ. ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಉತ್ತಮ ಶೈಕ್ಷಣಿಕ ವಾತಾವರಣ, ಶಿಕ್ಷಕರು , ಹಿರಿಯ ವಿದ್ಯಾರ್ಥಿಗಳು, ಉತ್ತಮ ಓದು ಮತ್ತು ಅನುಭವಗಳು ನೆರವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಳಿಯ ಹಿರಿಯ ಸದಸ್ಯರಾದ ಕೆ ಶಾಂತಾರಾಮ್ ಪ್ರಭು ವಹಿಸಿದ್ದರು.

ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ. ವಿಶ್ವಸ್ಥ ಮಂಡಳಿಯ ಸದಸ್ಯರಾದ. ಕೆ.ದೇವದಾಸ್ ಕಾಮತ್, ರಾಜೇಂದ್ರ ತೋಳಾರ್, ಸದಾನಂದ ಛಾತ್ರ ಆಡಳಿತ ಮಂಡಳಿ ಸದಸ್ಯರಾದ ಯು.ಎಸ್.ಶೆಣೈ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ. ಎಂ.ಗೊಂಡ ಉಪಸ್ಥಿತರಿದ್ದರು.

ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಬೋಧಕೇತರ ಸಿಬ್ಬಂದಿ ಮಂಜುನಾಥರನ್ನು ಸನ್ಮಾನಿಸಿ ಗೌರವಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯದ ನಡೆಸಿದ ಪದವಿ ಪರೀಕ್ಷೆಯಲ್ಲಿ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳಾದ ಬಿ.ಎ ಯಲ್ಲಿ ಮಿಥುನ ಪ್ರಭು, (ಪ್ರಥಮ ರ್‍ಯಾಂಕ್ ) ಯು, ಸುಶ್ಮಿತಾ ಶೆಟ್ಟಿ (ಆರನೇ ರ್‍ಯಾಂಕ್) ವಿಜ್ಞಾನ ವಿಭಾಗದಲ್ಲಿ ಶ್ರೀ ಕೃಷ್ಣ ಕೆದಿಲಾಯ ಸದಾನಂದ (ಪ್ರಥಮ ರ್‍ಯಾಂಕ್), ಸುಶ್ಮಿತಾ ಜಿ.ಎಸ್(ಆರನೇ ರ್‍ಯಾಂಕ್) ಬಿ.ಬಿ.ಎ ವಿಭಾಗದಲ್ಲಿ ಅರ್ಪಿತಾ (ಏಳನೇ ರ್‍ಯಾಂಕ್), ಬಿ.ಸಿ.ಎ ವಿಭಾಗದಲ್ಲಿ ರಕ್ಷಿತಾ (ಪ್ರಥಮ ರ್‍ಯಾಂಕ್), ಮಾನಸ (ದ್ವಿತೀಯ ರ್‍ಯಾಂಕ್), ಪಾವನಾ (ಎಂಟನೇ ರ್‍ಯಾಂಕ್) ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾಲೇಜಿನ ಅತ್ಯುತ್ತಮ ವಿದ್ಯಾರ್ಥಿನಿಗೆ ಕೊಡಮಾಡುವ ಸುನಿಧಿ ಹೆಬ್ಬಾರ್ (ತೃತೀಯ ಬಿ.ಎಸ್.ಸಿ ) ನೀಡಿ ಗೌರವಿಸಲಾಯಿತು.

ಕಾಲೇಜಿನ ಐಕ್ಯೂ‌ಎಸಿ ಸಂಯೋಜಕರಾದ ಪ್ರೊ. ಸತ್ಯನಾರಾಯಣ ಹತ್ವಾರ್ ಸ್ವಾಗತಿಸಿದರು.
ಕಂಪ್ಯೂಟರ್ ವಿಭಾಗದ ಪ್ರಾಧ್ಯಾಪಕರಾದ ವಿಜಯಲಕ್ಷ್ಮಿ ಶೆಟ್ಟಿ, ಕಾರ್ಯಕ್ರಮ ನಿರೂಪಿಸಿದರು. ಪರಿಚಯಿಸಿದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಶೈಲಾ ಆರ್, ವಾಣಿಜ್ಯ ವಿಭಾಗದ ಓಂ ಶ್ರೀ ಶೆಟ್ಟಿ, ದಿವ್ಯ ಮರಿಟಾ ಫೆರ್ನಾಂಡಿಸ್ ಸಾಧಕ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.
ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ಕುಂದಾಪ್ರ ೮೯.೬ ಎಫ್.ಎಮ್. ಕುರಿತು ಕಾರ್ಯಕ್ರಮ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಮಾತನಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!