spot_img
Monday, March 16, 2026
spot_img

ಭಾರತದ ನಾಲ್ಕು ವಾಯುನೆಲೆಗಳ ಮೇಲೆ ಪಾಕ್‌ ದಾಳಿ | ಹೈಸ್ಪೀಡ್‌ ಕ್ಷಿಪಣಿ ಬಳಕೆ : ಕರ್ನಲ್ ಸೋಫಿಯಾ ಖುರೇಷಿ

ಜನಪ್ರತಿನಿಧಿ (ನವದೆಹಲಿ) : ಪೆಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ವಿರುದ್ಧ ನಡೆಸಿದ ಆಪರೇಷನ್ ಸಿಂದೂರ್ ಬಳಿಕ ಭಾರತ-ಪಾಕಿಸ್ತಾನ ಮಧ್ಯೆ ಯುದ್ಧ ನಡೆಯುತ್ತಿದೆ. ಈ ಬಗ್ಗೆ ಇಂದು(ಶನಿವಾರ) ಮತ್ತೆ ಮಹಿಳಾ ಸೇನಾಧಿಕಾರಿಗಳು ವಿದೇಶಾಂಗ ಇಲಾಖೆ ಕಾರ್ಯದರ್ಶಿಗಳಾದ ವಿಕ್ರಮ್ ಮಿಸ್ರಿ ಅವರ ಜೊತೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪಾಕಿಸ್ತಾನಿ ಸೇನೆಯು ಪಶ್ಚಿಮ ಗಡಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದೆ. ಅದು ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು, ಯುದ್ಧಸಾಮಗ್ರಿಗಳು ಮತ್ತು ಫೈಟರ್ ಜೆಟ್‌ಗಳನ್ನು ಬಳಸಿದೆ. ಭಾರತ ಅನೇಕ ಅಪಾಯಗಳನ್ನು ತಡೆದಿದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ 26ಕ್ಕೂ ಹೆಚ್ಚು ಸ್ಥಳಗಳಲ್ಲಿ ವಾಯುದಳದ ಮೂಲಕ ನುಸುಳಲು ಪ್ರಯತ್ನಿಸಿತು. ಉಧಮ್‌ಪುರ, ಭುಜ್, ಪಠಾಣ್‌ಕೋಟ್, ಬಟಿಂಡಾದಲ್ಲಿನ ವಾಯುಪಡೆಯ ನೆಲೆಗಳಲ್ಲಿ ನಮ್ಮ ಸೇನಾಉಪಕರಣಗಳು ಹಾನಿಗೊಳಿಸಿ ಸಿಬ್ಬಂದಿಗೆ ತೊಂದರೆ ನೀಡಿದ್ದಾರೆ. ಪಂಜಾಬ್‌ನ ವಾಯುನೆಲೆಯನ್ನು ಗುರಿಯಾಗಿಸಲು ಬೆಳಗಿನ ಜಾವ 1:40 ಕ್ಕೆ ಹೈಸ್ಪೀಡ್ ಕ್ಷಿಪಣಿಗಳನ್ನು ಬಳಸಿದರು. ಜಮ್ಮು-ಕಾಶ್ಮೀರದ ಆರೋಗ್ಯ ಸೌಲಭ್ಯಗಳು ಮತ್ತು ಶಾಲೆಗಳ ಮೇಲೂ ದಾಳಿ ಮಾಡಿದ್ದಾರೆ, ಉಧಮ್‌ಪುರ, ಪಠಾಣ್‌ಕೋಟ್, ಅಧಮ್‌ಪುರ ಮತ್ತು ನಲಿಯಾದಲ್ಲಿನ ವಾಯುನೆಲೆಗಳು ದಾಳಿಯ ಗುರಿಗಳಲ್ಲಿ ಸೇರಿವೆ ಎಂದು ಕರ್ನಲ್ ಸೋಫಿಯಾ ಖುರೇಷಿ ತಿಳಿಸಿದ್ದಾರೆ.

26 ಸ್ಥಳಗಳಲ್ಲಿ ಒಳನುಸುಳಲು ಪ್ರಯತ್ನಿಸಲು ಪಾಕಿಸ್ತಾನ ಸುಮಾರು 300 ರಿಂದ 400 ಡ್ರೋನ್‌ಗಳನ್ನು ಬಳಸಿದೆ. ಡ್ರೋನ್‌ಗಳ ಅವಶೇಷಗಳ ವಿಧಿವಿಜ್ಞಾನ ತನಿಖೆ ನಡೆಸಲಾಗುತ್ತಿದೆ. ಆರಂಭಿಕ ವರದಿಗಳು ಅವು ಟರ್ಕಿಶ್ ಆಸಿಸ್‌ಗಾರ್ಡ್ ಸೊಂಗಾರ್ ಡ್ರೋನ್‌ಗಳು ಎಂದು ಸೂಚಿಸುತ್ತವೆ ಎಂದರು.

ಪಾಕಿಸ್ತಾನವು ಶ್ರೀನಗರ, ಅವಂತಿಪುರ ಮತ್ತು ಉಧಂಪುರ್ ವಾಯುನೆಲೆಗಳಲ್ಲಿರುವ ಆಸ್ಪತ್ರೆಗಳು ಮತ್ತು ಶಾಲಾ ಆವರಣಗಳನ್ನು ಗುರಿಯಾಗಿಸಿಕೊಂಡಿದೆ. ಇದು ನಾಗರಿಕ ಮೂಲಸೌಕರ್ಯಗಳ ಮೇಲೆ ದಾಳಿ ಮಾಡುವ ಪಾಕಿಸ್ತಾನದ ಬೇಜವಾಬ್ದಾರಿ ಪ್ರವೃತ್ತಿಯನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹೇಳಿದರು.

ಪಾಕಿಸ್ತಾನ ಸೇನೆಯು ಮುಂದಕ್ಕೆ ಬರುತ್ತಿದ್ದು, ಇದು ಪ್ರಚೋದನಕಾರಿ ಕ್ರಮವಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಎದುರಿಸಲು ಸಜ್ಜಾಗಿದೆ ಎಂದರು.

ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾತನಾಡಿ, ಪಾಕಿಸ್ತಾನದ ಕ್ರಮಗಳು ಪ್ರಚೋದನೆ ಮತ್ತು ಉಲ್ಬಣಕ್ಕೆ ಕಾರಣವಾಗಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಪಾಕಿಸ್ತಾನದ ಕಡೆಯಿಂದ ಈ ಪ್ರಚೋದನೆ ಮತ್ತು ಉಲ್ಬಣಗಳಿಗೆ ಜವಾಬ್ದಾರಿಯುತ ಪ್ರತಿಕ್ರಿಯೆ ನೀಡಿದೆ. ಇಂದು ಬೆಳಗ್ಗೆ, ಈ ಉಲ್ಬಣ ಮತ್ತು ಪ್ರಚೋದನಕಾರಿ ಮಾದರಿಯ ಪುನರಾವರ್ತನೆಯನ್ನು ನಾವು ನೋಡಿದ್ದೇವೆ ಎಂದರು.

ಈ ಮಧ್ಯೆ, ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿಗೆ ಪ್ರತಿಕ್ರಿಯೆಯಾಗಿ, ಜಮ್ಮುವಿನ ಅಖ್ನೂರ್ ಎದುರಿನ ಭಯೋತ್ಪಾದಕ ಲಾಂಚ್‌ಪ್ಯಾಡ್ ನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ ಎಂದು ಬಿಎಸ್‌ಎಫ್ ಹೇಳಿದೆ. ಪಾಕಿಸ್ತಾನದ ಸಿಯಾಲ್‌ಕೋಟ್ ಜಿಲ್ಲೆಯ ಲೂನಿಯಲ್ಲಿ ಈ ನೆಲೆ ಇತ್ತು ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!