spot_img
Wednesday, April 1, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್: ಶಿಕ್ಷಕರ ತರಬೇತಿ ಕಾರ್ಯಾಗಾರ

ತೆಕ್ಕಟ್ಟೆ, ಮೇ 15: ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆ ಇಲ್ಲಿನ ಶಿಕ್ಷಕರಿಗೆ ತರಭೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಸ್ಕಿಲ್ ಡೆವಲಪ್ಮೆಂಟ್ ತರಭೇತುದಾರ ಡಾ. ಶಿಜು ಥೊಮಸ್ ಇವರು ‘ಹೊಸ ಶೈಕ್ಷಣಿಕ ಆಯಾಮಗಳು’ ಹಾಗೂ ‘ಕ್ಲಾಸ್ ರೂಮ್ ಮ್ಯಾನೇಜ್ಮೆಂಟ್’ ವಿಷಯದ ಕುರಿತು ಶಿಕ್ಷಕರಿಗೆ ತರಭೇತಿಯನ್ನು ನೀಡಿದರು. ತರಗತಿಯಲ್ಲಿ ವಿವಿಧ ಕೌಟುಂಬಿಕ ಹಿನ್ನಲೆಯುಳ್ಳ ಮಕ್ಕಳು, ವಿವಿಧ ಬುದ್ಧಿಮತ್ತೆ ಮಟ್ಟದ ಮಕ್ಕಳು, ವಿವಿಧ ಅಗತ್ಯತೆಗಳನ್ನು ಹೊಂದಿರುವ ಮಕ್ಕಳಿದ್ದು ಪ್ರತೀ ಮಗುವಿನ ಮನಃ ಸ್ಥಿತಿಯನ್ನು ಅರಿತು ಅವರೊಂದಿಗೆ ಬೆರೆತು ಶಿಕ್ಷಕರು ಮಕ್ಕಳ ಕಲಿಕೆಗೆ ಸಹಕಾರವಾಗಬೇಕು ಎಂದು ತಿಳಿಸಿದರು. ವಿವಿಧ ಘಟನಾವಳಿಗಳನ್ನಾಧರಿಸಿ ಶಿಕ್ಷಕ ಹಾಗೂ ವಿದ್ಯಾರ್ಥಿಗಳ ಬಾಂಧ್ಯವ್ಯದ ಕುರಿತು ವಿವರಿಸಿದರು.ಎನ್.ಇ.ಪಿ ಗೆ ಅನುಗುಣವಾಗಿ ಹೊಸ ಶೈಕ್ಷಣಿಕ ವಿಧಾನಗಳನ್ನು ಅಳವಡಿಸಿ ಬೋಧನಾ ಪದ್ದತಿಯನ್ನು ಸುಧಾರಿಸುವ ಕ್ರಮಗಳನ್ನು ತಿಳಿಸಿದರು. ಶಿಕ್ಷಕರಿಗೆ ವಿವಿಧ ಚಟುವಟಿಕೆಗಳನ್ನು ನೀಡಿ ಪ್ರಾಯೋಗಿಕ ಕಲಿಕೆಯ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕ ವೃಂದದವರು ಹಾಗೂ ಆಕ್ಸ್ಫರ್ಡ್ ಎಕ್ಸಿಕ್ಯೂಟಿವ್ ಸುಜಿತ್ ಕುಮಾರ್ರವರು ಉಪಸ್ಥಿತರಿದ್ದರು, ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!