spot_img
Monday, June 23, 2025
spot_img

ಅಗಲಿದ ವೃತ್ತ ನಿರೀಕ್ಷಕ ನಂಜಪ್ಪ ಅವರಿಗೆ ಕುಂದಾಪುರದಲ್ಲಿ ಅಂತಿಮ ಗೌರವ

ಕುಂದಾಪುರ : ಕುಂದಾಪುರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ನಂಜಪ್ಪ ಎನ್. ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾಗಿದ್ದು, ಗುರುವಾರ ಬೆಳಿಗ್ಗೆ ಕುಂದಾಪುರ ವೃತ್ತ ನಿರೀಕ್ಷಕರ ಕಚೇರಿ ಆವರಣದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು.

ಶಾಸಕ ಕಿರಣ್ ಕೊಡ್ಗಿ, ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುರಸಭಾಧ್ಯಕ್ಷ ಮೋಹನ್ ದಾಸ್ ಶೆಣೈ, ಕಾಂಗ್ರೆಸ್ ಮುಖಂಡ ದಿನೇಶ್ ಹೆಗ್ಡೆ ಮೊಳಹಳ್ಳಿ ಸಹಿತ ಗಣ್ಯರು ಅಂತಿಮ ದರ್ಶನ ಪಡೆದರು.

ಸಕಲ ಸರಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸರಿಂದ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು.

ಕುಂದಾಪುರ ಡಿವೈ‌ಎಸ್ಪಿ ಹೆಚ್. ಡಿ. ಕುಲಕರ್ಣಿ, ಕುಂದಾಪುರ ಉಪ ವಿಭಾಗದ ವಿವಿಧ ವೃತ್ತ ನಿರೀಕ್ಷಕರು, ಎಲ್ಲ ಠಾಣೆಗಳ ಉಪನಿರೀಕ್ಷಕರು, ಪೊಲೀಸರು, ಸಾರ್ವಜನಿಕರಿಂದ ಅಂತಿಮ ನಮನ ಸಲ್ಲಿಸಿದರು.

 

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!