spot_img
Friday, March 6, 2026
spot_img

ಕುಂದಾಪುರ: 94ಸಿ ಹಕ್ಕುಪತ್ರ ವಿತರಣೆ

ಕುಂದಾಪುರ, ಮೇ 31: ಕುಂದಾಪುರ ತಾಲ್ಲೂಕು ಪಂಚಾಯಿತಿಯ ಆಡಳಿತ ಸೌಧ ಸಭಾಂಗಣದಲ್ಲಿ ಬ್ರಹ್ಮಾವರ ತಾಲ್ಲೂಕು ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ವಾಸವಾಗಿರುವ ಫಲಾನುಭವಿಗಳಿಗೆ 94 ಸಿ ಅಡಿಯಲ್ಲಿ ಹಕ್ಕುಪತ್ರವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್‌ಕುಮಾರ ಕೊಡ್ಗಿ ಅವರು ಹಕ್ಕುಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾಸ್ತವ್ಯದ ಹಕ್ಕುಪತ್ರ ಎಲ್ಲರಿಗೂ ಅಗತ್ಯವಾಗಿ ದೊರಕಬೇಕು. ೯೪ ಸಿ ಅಡಿಯಲ್ಲಿ ಅರ್ಜಿ ಹಾಕಿರುವ ಅರ್ಜಿದಾರರು ಹಕ್ಕುಪತ್ರ ದೊರಕದೆ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಹಕ್ಕು ಪತ್ರ ಒದಗಿಸಲಾಗಿದೆ ಎಂದರು.

ಬ್ರಹ್ಮಾವರ ತಾಲೂಕು ಕೋಟ ಹೋಬಳಿಯ ಗ್ರಾಮಗಳ ವ್ಯಾಪ್ತಿಯ, ೪ ಜನ ಅರ್ಹ ಫಲನುಭವಿಗಳಿಗೆ ಹಕ್ಕು ಪತ್ರ ಒದಗಿಸಲಾಗಿದ್ದು, ಭೂಮಿ ಹಕ್ಕು ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಹೆಗಡೆ, ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಶಾಸಕರ ಆಪ್ತ ಕಾರ್ಯದರ್ಶಿ ಕೆ. ಮಹಿಮ ಶೆಟ್ಟಿ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!