spot_img
Friday, January 30, 2026
spot_img

ಆರ್ ಸಿ ಬಿ ಹುಡುಗರೇ ಟ್ರೋಫಿ ಗೆದ್ದುಕೊಂಡು ತವರಿಗೆ ಬನ್ನಿ : ಡಿಸಿಎಂ ಡಿಕೆಶಿ ಶುಭ ಹಾರೈಕೆ

ಜನಪ್ರತಿನಿಧಿ (ಬೆಂಗಳೂರು) : ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಪಂಜಾಬ್ ನಡುವೆ ಐಪಿಎಲ್​ನ ಫೈನಲ್ ಪಂದ್ಯ ಇಂದು ನಡೆಯಲಿದೆ. ಫೈನಲ್ ಪಂದ್ಯವಾಗಿದ್ದರಿಂದ ಅದರಲ್ಲಿ ಆರ್​ಸಿಬಿ ಫೈನಲ್​ ತಲುಪಿದ್ದರಿಂದ ಟ್ರೋಫಿ ಗೆದ್ದು ಬರುತ್ತೆ ಎನ್ನುವ ಭರವಸೆ ಎಲ್ಲರಲ್ಲೂ ಇದೆ. ಆರ್​ಸಿಬಿ ಹುಡುಗರೇ ಟ್ರೋಫಿ ಗೆದ್ದುಕೊಂಡು ತವರಿಗೆ ಬನ್ನಿ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಶುಭ ಹಾರೈಸಿದರು.

ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಆರ್​ಸಿಬಿ ತಂಡದ ಜೆರ್ಸಿ ಧರಿಸಿ ವೀಡಿಯೋ ಮೂಲಕ ಶುಭ ಹಾರೈಸಿದ್ದು, ಇಂತಹ ಅದ್ಭುತ ದಿನಕ್ಕಾಗಿ ಕಳೆದ 18 ವರ್ಷಗಳಿಂದ ಕಾತುರದಿಂದ ಕಾಯುತ್ತಿದ್ದೇವೆ. ಟ್ರೋಫಿಗಾಗಿ ಸಾಕಷ್ಟು ಶ್ರಮ ಪಟ್ಟು ಆರ್​ಸಿಬಿ ಕೊನೆಗೆ ಐಪಿಎಲ್​ನಲ್ಲಿ ಫೈನಲ್​ ತಲುಪಿದೆ. ಇಂದು ಪಂಜಾಬ್ ಕಿಂಗ್ಸ್​ ವಿರುದ್ಧ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಅಖಾಡಕ್ಕೆ ಇಳಿಯುತ್ತಿದೆ. ಇಡೀ ರಾಜ್ಯವೆಲ್ಲಾ ಟ್ರೋಫಿ ಗೆದ್ದು ಬರಲಿ ಎಂದು ಆರ್​ಸಿಬಿ ತಂಡದ ಹಿಂದೆ ನಿಂತಿದೆ. ಆ ಅದ್ಭುತ ಕ್ಷಣವನ್ನು ಸಾಧಿಸಿ ತೋರಿಸಿ ಎಂದು ಅವರು ಹೇಳಿದ್ದಾರೆ.

ಆರ್​ಸಿಬಿ ಕೇವಲ ಜೆರ್ಸಿ ಅಲ್ಲ, ಅದರ ಮೇಲೆ ಮಿಲಿಯನ್, ಮಿಲಿಯನ್ ಡ್ರೀಮ್​ಗಳು ಇವೆ. ನಾವು ನಿಮ್ಮೊಂದಿಗೆ ಇದ್ದೇವೆ. ಕರ್ನಾಟಕ ಹಾಗೂ ಇಲ್ಲಿನ ಸರ್ಕಾರವೆಲ್ಲಾ ನಿಮ್ಮೊಂದಿಗೆ ನಿಂತಿದೆ. ಆರ್​ಸಿಬಿ ಹುಡುಗರೇ ತವರಿಗೆ ಕಪ್​ ಗೆದ್ದುಕೊಂಡು ಬನ್ನಿ. ಟ್ರೋಫಿಗಾಗಿ ಕರ್ನಾಟಕದ ಕೋಟಿ ಕೋಟಿ ಜನರು ಹಾಗೂ ನಾನು ಕಾಯುತ್ತಿದ್ದೇನೆ. ಎಲ್ಲರಿಗೂ ಆಲ್​ ದೀ ಬೆಸ್ಟ್​ ಎಂದು ಅವರು ಶುಭ ಹಾರೈಸಿದ್ದಾರೆ.

https://x.com/DKShivakumar/status/1929737562425643422

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!