spot_img
Monday, March 16, 2026
spot_img

ಅರುಣ್‌ ಕುಮಾರ್‌ ಪುತ್ತಿಲ ಸೇರಿ ದ.ಕ ಜಿಲ್ಲೆಯ 36 ಮಂದಿಯ ಗಡಿಪಾರು ಪ್ರಕ್ರಿಯೆ ಆರಂಭ

ಜನಪ್ರತಿನಿಧಿ (ಮಂಗಳೂರು) : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತಮ್ಮ ವ್ಯಾಪ್ತಿಯಲ್ಲಿ ಪದೇ ಪದೇ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಅಥವಾ ಕ್ರಿಮಿನಲ್ ಅಪರಾಧಗಳ ಹಿನ್ನೆಲೆಯುಳ್ಳ 36 ವ್ಯಕ್ತಿಗಳ ವಿರುದ್ಧ ಗಡಿಪಾರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿಪಾರು ಮಾಡಲಾಗುತ್ತಿರುವ ವ್ಯಕ್ತಿಗಳು ಬಂಟ್ವಾಳ, ವಿಟ್ಲ, ಪುತ್ತೂರು ಪಟ್ಟಣ ಮತ್ತು ಗ್ರಾಮಾಂತರ, ಕಡಬ, ಸುಳ್ಯ, ಉಪ್ಪಿನಂಗಡಿ, ಪುಂಜಾಲಕಟ್ಟೆ ಮತ್ತು ಬೆಳ್ತಂಗಡಿ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದವರು ಎಂದು ಅವರು ಹೇಳಿದ್ದಾರೆ.

ಅಧಿಕಾರಿಗಳ ಪ್ರಕಾರ, ಪುನರಾವರ್ತಿತ ಅಪರಾಧಗಳ ಇತಿಹಾಸ ಹೊಂದಿರುವ ಮತ್ತು ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಪಟ್ಟಿಯಲ್ಲಿ ಜಿಲ್ಲೆಯ ವಿವಿಧ ಭಾಗಗಳ 22 ರಿಂದ 54 ವರ್ಷ ವಯಸ್ಸಿನ ವ್ಯಕ್ತಿಗಳು ಇದ್ದು, ಅವರ ವಿರುದ್ಧ ಹಲ್ಲೆ, ಬೆದರಿಕೆ, ಸುಲಿಗೆ ಮತ್ತು ಗ್ಯಾಂಗ್ ವಾರ್ ಚಟುವಟಿಕೆಯಲ್ಲಿ ತೊಡಗಿರುವ ಆರೋಪ ಹೊರಿಸಲಾಗಿದೆ.

“ಈ ಪ್ರದೇಶದಲ್ಲಿ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ನಾವು ಕಠಿಣ ಕ್ರಮ ಕೈಗೊಳ್ಳುತ್ತಿದ್ದೇವೆ. ಸಮಾಜಕ್ಕೆ ಪದೇ ಪದೇ ಬೆದರಿಕೆಯನ್ನುಂಟುಮಾಡುವ ಪುನರಾವರ್ತಿತ ಅಪರಾಧಗಳನ್ನು ತಡೆಗಟ್ಟುವ ಕ್ರಮವೆಂದರೆ ಗಡಿಪಾರು. ಈ ಸಂಬಂಧ ಪೊಲೀಸರು ನೋಟಿಸ್ ಜಾರಿ ಮಾಡುವ ಪ್ರಕ್ರಿಯೆಯಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ ಅವರು ತಿಳಿಸಿದ್ದಾರೆ.

15 ಮುಸ್ಲಿಮರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 36 ಜನರನ್ನು ಗಡಿಪಾರು ಮಾಡಲಾಗುತ್ತಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!