spot_img
Saturday, February 14, 2026
spot_img

ಜ್ಯೂನಿಯರ್ ಜೆ.ಸಿ ಕುಂದಾಪುರ ಸಿಟಿ: ಆರ್.ಎನ್.ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ನವೀನ ಕುಮಾರ್ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪುರ: ಜ್ಯೂನಿಯರ್ ಜೆ.ಸಿ.ಕುಂದಾಪುರ ಸಿಟಿ ಇವರ ಆಶ್ರಯದಲ್ಲಿ ಕುಂದಾಪುರದ ಆರ್.ಎನ್.ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ’ ದ ಅಂಗವಾಗಿ ಆರ್. ಎನ್. ಎಸ್. ಸಂಯುಕ್ತ ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನವೀನ ಕುಮಾರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಓರಿಯಂಟೇಶನ್ ಮತ್ತು ಯುತ್ ಎಫೇರ್ಸ್ ನ ರಾಷ್ಟ್ರೀಯ ನಿರ್ದೇಶಕರಾದ ಹುಸೇನ್ ಹೈಕಾಡಿಯವರು ಸನ್ಮಾನಿತರಾದ ನವೀನ ಕುಮಾರ್ ಶೆಟ್ಟಿಯವರ ಸಾಮಾಜಿಕ ಕೊಡುಗೆಗಳನ್ನು ವಿವರಿಸಿದರು.

ಸೀನಿಯರ್ ಛೇಂಬರ್ಸ್ ಇಂಟರ್ ನ್ಯಾಶನಲ್ ನ ರಾಷ್ಟ್ರೀಯ ಅಧ್ಯಕ್ಷ ಎಮ್. ಆರ್. ಜಯೇಶ್, ಎಸ್.ಸಿ.ಐನ ಏರಿಯಾ-ಜಿ ಇದರ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ಧಗಂಗಯ್ಯ, ಕೋಟಾ ಲೀಜನ್ ನ ಅಧ್ಯಕ್ಷ ಕೇಶವ ಆಚಾರ್, ಜೆಜೆಸಿ ಸುಮೇಧಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸೇವ್ ವಾಟರ್’ ಥೀಮ್ ನ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಕಾಲೇಜಿನ ವಿಜ್ಞಾನ ವಿಬಾಗದ ವಿದ್ಯಾರ್ಥಿನಿ ಶರಧಿ ಪ್ರಾರ್ಥಿಸಿದರು. ಜೆಸಿ‌ಐ ಕುಂದಾಪುರ ಸಿಟಿ ಜೆ.ಸಿ ಯ ಅಧ್ಯಕ್ಷ ಸಲೀಮ್ ವಂದಿಸಿದರು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!