spot_img
Sunday, February 15, 2026
spot_img

‘ವಂಡ್ಸೆ ಸಂಪೂರ್ಣ ಸಾಕ್ಷರತಾ ಪಂಚಾಯತ್’ ಘೋಷಣೆ

ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜು.10ರಂದು ಸಂಪೂರ್ಣ ಸಾಕ್ಷರ ಕಾರ್ಯಕ್ರಮದಲ್ಲಿ ‘ವಂಡ್ಸೆ ಸಂಪೂರ್ಣ ಸಾಕ್ಷರತಾ ಪಂಚಾಯತ್ ಘೋಷಣೆ’ ಮಾಡುವುದರೊಂದಿಗೆ ಈ ಕಾರ್ಯಕ್ರಮದಲ್ಲಿ ದುಡಿದ ಸ್ವಯಂಸೇವಕರಾದ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಿ, ಸಾಕ್ಷರತಾ ಇಲಾಖೆ ನೀಡಿದ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಸಾಕ್ಷರತಾ ಸ್ವಯಂಸೇವಕರಾದ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಾದ ಸರೋಜಾ, ವನಿತಾ, ಪ್ರಮೀಳಾ, ಅಕ್ಕಮ್ಮ, ರೇಖಾ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಗೀತಾ ಅವಿನಾಶ್, ಉಪಾಧ್ಯಕ್ಷರಾದ ಗೋವರ್ಧನ್ ಜೋಗಿ, ಸದಸ್ಯರಾದ ಉದಯ್ ಕುಮಾರ್ ಶೆಟ್ಟಿ ಪ್ರಶಾಂತ್ ಪೂಜಾರಿ, ಸುಬ್ಬು, ಶಶಿಕಲಾ ವಂಡ್ಸೆ, ಸುಶೀಲಾ, ಕಾರ್ಯದರ್ಶಿ ಸುರೇಶ ಎ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತಿಸಿದರು. ವಂಡ್ಸೆ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!