spot_img
Thursday, March 5, 2026
spot_img

ಸರಸ್ವತಿ ವಿದ್ಯಾಲಯದಲ್ಲಿ ಸಿಇಟಿ, ನೀಟ್ ವಿಶೇಷ ಕೋಚಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ 

 ಗಂಗೊಳ್ಳಿ : ಆನ್ಲೈನ್ ತರಗತಿಗಳಿಗೆ ಹೋಲಿಸಿದರೆ ವಿದ್ಯಾರ್ಥಿ ಶಿಕ್ಷಕರ ನೇರ ಮುಖಾಮುಖಿ ಸಂವಹನ  ಸಾಧ್ಯವಾಗುವ ಭೌತಿಕ ತರಗತಿಗಳು   ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚು ಪೂರಕವಾದ ಧನಾತ್ಮಕ ಪರಿಣಾಮವನ್ನು ಬೀರುತ್ತದೆ ಮತ್ತು ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಬದ್ಧತೆಯಿಂದ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ  ಎಂದು ಜಿ ಎಸ್ ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ಅಭಿಪ್ರಾಯಪಟ್ಟರು.
 ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರಿನ ಅರ್ಜುನ್ ಅಕಾಡೆಮಿಯ ಸಹಯೋಗದಲ್ಲಿ ಆರಂಭಗೊಂಡ  ಸಿಇಟಿ ಮತ್ತು ನೀಟ್ ತರಬೇತಿ ಕಾರ್ಯಕ್ರಮಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
 ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆ ವಹಿಸಿದ್ದರು.
 ಅರ್ಜುನ್ ಅಕಾಡೆಮಿಯ ಪ್ರದೀಪ್ ಎನ್. ಎಸ್ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಆಂಗ್ಲ ಭಾಷೆ ಉಪನ್ಯಾಸಕ ಥಾಮಸ್ ಪಿ. ಎ , ವಿಜ್ಞಾನ ವಿಭಾಗದ ಉಪನ್ಯಾಸಕಿಯರಾದ ಪವಿತ್ರ, ರಮ್ಯ ಮತ್ತು ಪಲ್ಲವಿ ಉಪಸ್ಥಿತರಿದ್ದರು. ನರೇಂದ್ರ ಎಸ್ ಗಂಗೊಳ್ಳಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!