spot_img
Monday, February 16, 2026
spot_img

ಗಂಗೊಳ್ಳಿ: ಮಲ್ಯರಮಠ ಶ್ರೀ ವೆಂಟಕರಮಣ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹ ಮಹೋತ್ಸವ

ಕುಂದಾಪುರ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಟಕರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಶ್ರಾವಣ ಮಾಸದಲ್ಲಿ ಜರಗುವ ಅಖಂಡ ಭಜನಾ ಸಪ್ತಾಹ ಮಹೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಂತೆ ಜು.೩೦ರಿಂದ ಆ.೬ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಜು.30ರಂದು ಬೆಳಿಗ್ಗೆ 9.05ರ ಸಿಂಹ ಲಗ್ನ ಸುಮುಹೂರ್ತದಲ್ಲಿ ದೀಪ ಸ್ಥಾಪನಾಪೂರ್ವಕ ಭಜನಾ ಸಪ್ತಾಹ ಪ್ರಾರಂಭವಾಗಲಿದ್ದು, ಆ.6ರಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಳ್ಳಲಿದೆ. ಆ.5ರಂದು ಸಂಜೆ 5 ಗಂಟೆಗೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಪ್ರಸಾದ ವಿತರಣೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಅಖಂಡ ಭಜನಾ ಸಪ್ತಾಹ ಮಹೋತ್ಸವ ಸಮಯದಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ ಭಜನಾ ಮಂಡಳಿಗಳು ಭಜನಾ ಸೇವೆ ಸಮರ್ಪಿಸಲಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!