spot_img
Monday, April 6, 2026
spot_img

ಭಾರತವೆನ್ನುವುದು ಪುಣ್ಯಕ್ಷೇತ್ರ-ಮೌಲ್ಯಸುಧಾದಲ್ಲಿ ಅಕ್ಷಯ ಗೋಖಲೆ ಅಭಿಮತ

ಗಣಿತನಗರ: ನಾವು ಬದುಕಿನಲ್ಲಿ ಸಾಧನೆ ಮಾಡಿದರೂ ಸಹ ಬದುಕುದೇಶಕ್ಕೆ ಸಮಪಿತವಾಗಿರಲಿ ಎಂದು ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ನುಡಿದರು.

ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯ ಸುಧಾ ಮಾಲಿಕೆ 35ರಲ್ಲಿ ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ ಬಹುರತ್ನ ಪ್ರಸವೀ ಭಾರತೀ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ನಮ್ಮ ಬದುಕು ಸಮಾಜಕ್ಕೆ ಸಮರ್ಪಿತವಾಗಿರಲಿ. ಒಳ್ಳೆಯ ಆದರ್ಶದ ಅಡಿಗಲ್ಲಿನ ಮೇಲೆ ನಮ್ಮ ಭವಿಷ್ಯವನ್ನು ನಾವು ಕಟ್ಟಿಕೊಳ್ಳಬೇಕು. ಭಾರತವನ್ನು ಬೆಳಗಿಸುವಂತಹ ಮುತ್ತು ರತ್ನಗಳು ನಾವಾಗಬೇಕು. ಅದ್ಭುತ ಸೈನಿಕ ಪರಂಪರೆ ನಮ್ಮದು. ನಮ್ಮ ಸೈನಿಕರೇ ನಮಗೆ ಸ್ಫೂರ್ತಿ ಎಂದು ನುಡಿಯುತ್ತಾ, ಕಾರ್ಗಿಲ್ ವಿಜಯದಲ್ಲಿ ಬಲಿದಾನಗೈದ ವೀರಯೋಧರ ಯಶೋಗಾಥೆಯನ್ನು ತೆರೆದಿಟ್ಟರು.

ಕಾರ್ಯಕ್ರಮದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ ಮತ್ತು ಶ್ರೀಮತಿ ಉಷಾ ರಾವ್ ಯು, ಡೀನ್ ಅಕಾಡೆಮಿಕ್ಸ್ ಡಾ. ಮಿಥುನ್‌ಯು, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಮುಖ್ಯಸ್ಥ ಸಂದೀಪಾ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಪ್ರಜ್ವಲ್ ಕುಲಾಲ್ ನಿರೂಪಿಸಿ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!