spot_img
Sunday, March 15, 2026
spot_img

ಪ.ಪೂ.ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ: ಶೈಕ್ಷಣಿಕ ಸಾಧಕರಿಗೆ ಗೌರವ

ಉಡುಪಿ : ವಿದ್ಯಾರ್ಥಿಗಳ ಏಳಿಗೆಗೆ ಶ್ರಮಿಸಿದ ಶಿಕ್ಷಕರ ಶ್ರಮ‌ಎಂದೂ ವ್ಯರ್ಥವಾಗದು. ಅಂತಹ ಕಾರ್ಯದಲ್ಲಿ ತೊಡಗಿಸಿಕೊಂಡ ಉಡುಪಿ ಜಿಲ್ಲಾ‌ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರ ಸಂಘದಕಾರ್ಯ ಶ್ಲಾಘನೀಯ ಎಂದು ಮಾಹೆಯ ಪ್ರಿನ್ಸಿಪಾಲ್ ಆಫಿಸರ್ ಡಾ.ಆದಿತ್ಯ ಮೋಹನ್ ಜಾಧವ್ ಹೇಳಿದರು.

ಮಾಹೆ ಮಣಿಪಾಲದಲ್ಲಿ ಆಗಸ್ಟ್ ೫, ೨೦೨೫ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಾಹೆ ಮಣಿಪಾಲದಲ್ಲಿ ಕೇವಲ ವೈದ್ಯಕೀಯ, ಇಂಜಿನಿಯರಿಂಗ್ ಮಾತ್ರವಲ್ಲದೇ ಇತರ ನೂರಾರು ಪದವಿ-ವೃತ್ತಿಪರ ಕೋರ್ಸುಗಳಿಗೆ ಅವಕಾಶವಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಮಾಹೆಯ ಡಬ್ಲ್ಯು.ಜಿ.ಎಸ್.ಎಚ್.ಎ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ.ಸತೀಶ್ ಜಯರಾಮ್ ಇವರು ವಿದ್ಯಾರ್ಥಿಗಳಿಗೆ ಹೋಟೆಲ್ ಮ್ಯಾನೇಜ್ ಮೆಂಟ್‌ಕೋರ್ಸ್‌ನ ಅವಕಾಶಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಜಿಲ್ಲಾ ಉಪನಿರ್ದೇಶಕರಾದ ಮಾರುತಿ ಇವರು೨೦೨೪-೨೫ನೇ ಸಾಲಿನ ಜಿಲ್ಲೆಯ ಶೈಕ್ಷಣಿಕ ವರ್ಷದ ಸಾಧನೆಗೆಕೊಡುಗೆಯಿತ್ತ ಉಪಸ್ಥಿತರಿದ್ದ ಖಾಸಗಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು ಗೌರವಿಸಿದರು.

ಸಭೆಯ‌ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ದಿನೇಶ್ ಎಂ ಕೊಡವೂರ್, ಸತತ ಎರಡು ವರ್ಷದ ಸಂಘದ ವಾರ್ಷಿಕ ಸಭೆಯನ್ನು ನಡೆಸಿಕೊಟ್ಟ ಮಾಹೆಯ ಟಾಪ್ಮಿ ಹಾಗೂ ಡಬ್ಲ್ಯು.ಜಿ.ಎಸ್.ಎಚ್.ಎ ಸಂಸ್ಥೆಗಳಿಗೆ ಸಂಘದ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು. ಜಿಲ್ಲೆಯು ಕಳೆದ ಶೈಕ್ಷಣಿಕ ವರ್ಷದಲ್ಲಿರಾಜ್ಯಕ್ಕೆ ಪಿಯುಸಿ ಫಲಿತಾಂಶದಲ್ಲಿಪ್ರಥಮ ಸ್ಥಾನಿಯಾಗಿ ಮೂಡಿಬರಲು ಶ್ರಮಿಸಿದ ಎಲ್ಲಾ ಪ್ರಾಂಶುಪಾಲರನ್ನು ಅಭಿನಂದಿಸಿ, ಜಿಲ್ಲಾಡಳಿತ ಮತ್ತು‌ಉಪನಿರ್ದೇಶಕರ ಮಾರ್ಗದರ್ಶನವನ್ನು ಸ್ಮರಿಸಿದರು. ಪ್ರಾಂಶುಪಾಲರ ಸಂಘವು ಪ್ರತೀವರ್ಷದಂತೆ ಶೈಕ್ಷಣಿಕವಾಗಿ ಮಾತ್ರವಲ್ಲದೆ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲೆಯ ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು, ಸಭೆಯಲ್ಲಿ ಉಪಸ್ಥಿತರಿದ್ದ ಪ್ರಾಂಶುಪಾಲರನ್ನು ಸಂಘ ಹಾಗೂ ಮಾಹೆ ಮಣಿಪಾಲದ ವತಿಯಿಂದ ಗೌರವಿಸಲಾಯಿತು.

ಆನಂದ ತೀರ್ಥ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ವಿಜಯ್‌ರಾವ್ ಸ್ವಾಗತಿಸಿ, ಜ್ಞಾನಸುಧಾ ಪ.ಪೂ.ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಕು.ದರ್ಶಿನಿ ಕೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!