spot_img
Monday, February 16, 2026
spot_img

ಸುರಭಿ ಬೈಂದೂರು: ರಾಜ್ಯಮಟ್ಟದ “ಕಥಾ ಸ್ಪರ್ಧೆ”ಯ ಮಾಹಿತಿ ಪತ್ರ ಅನಾವರಣ

ಬೈಂದೂರು: ಇಲ್ಲಿನ ಕಲಾಸಂಸ್ಥೆಯಾದ ಸುರಭಿ ರಿ.ಬೈಂದೂರು ಇದರ ಬೆಳ್ಳಿ ಹಬ್ಬದ ವರ್ಷದ ಅಂಗವಾಗಿ “ರಜತಯಾನ-೨೦೨೫” ಇದರ ಸವಿ ನೆನಪಿಗಾಗಿ ರಾಜ್ಯ ಮಟ್ಟದಲ್ಲಿ ನಡೆಸುತ್ತಿರುವ ಕಥಾಸ್ಪರ್ಧೆಯ ಸ್ಪರ್ಧಾ ನೀತಿಯನ್ನೊಳಗೊಂಡ ಮಾಹಿತಿ ಪತ್ರದ ಬಿಡುಗಡೆ ಸಮಾರಂಭವನ್ನು ನಡೆಸಲಾಯಿತು ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಕ.ಸಾ.ಪ.ದ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅವರು ಮಾತನಾಡಿ ಪ್ರಸ್ತುತ ವ್ಯವಸ್ಥೆಯಲ್ಲಿ ಕಥಾಸ್ಪರ್ಧೆಯ ಅಗತ್ಯತೆ ಬಗ್ಗೆ ಮತ್ತು ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಸಾಹಿತ್ಯದ ಪಾತ್ರವನ್ನು ತಿಳಿಸಿದರು. ಅಧ್ಯಕ್ಷತೆಯನ್ನು ಸುರಭಿ ಅಧ್ಯಕ್ಷ ಶ್ರೀ ಆನಂದ ಮದ್ದೂಡಿಯವರು ವಹಿಸಿದ್ದು ಕಥಾಸ್ಪರ್ಧೆಯ ಬಗ್ಗೆಮಾಹಿತಿ ನೀಡಿದರು. ವೇದಿಕೆಯಲ್ಲಿ ಸುರಭಿಯ ರಂಗ ನಿರ್ದೇಶಕ ಗಣೇಶ್ ಮಂದಾರ್ತಿ, ಖಜಾಂಚಿ ರಾಘವೇಂದ್ರ ಕೆ ಉಪಸ್ಥಿತರಿದ್ದು ನಿರ್ದೇಶಕ ಸುಧಾಕರ ಪಿ ಬೈಂದೂರು ಪ್ರಸ್ತಾವಿಕ ಮಾತನಾಡಿ ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!