spot_img
Monday, February 16, 2026
spot_img

ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಸತತ ನಾಲ್ಕನೇ ಬಾರಿ ಅಟಲ್ ಪಿಂಚಣಿ ಯೋಜನೆಯ ರಾಷ್ಟ್ರೀಯ ಪ್ರಶಸ್ತಿ

ಮಂಗಳೂರು: ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ೨೦೨೪-೨೫ನೇ ಸಾಲಿನಲ್ಲೂ ರಾಷ್ಟ್ರೀಯ ಪ್ರಶಸ್ತಿಗೆ ಪಾತ್ರವಾಗಿದ್ದು , ಈ ಪ್ರಶಸ್ತಿಯನ್ನು ಬ್ಯಾಂಕ್ ಸತತ ನಾಲ್ಕನೇ ಬಾರಿಗೆ ಮುಡಿಗೇರಿಸಿಕೊಂಡಿದೆ.

ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ೨೦೨೪-೨೫ನೇ ಸಾಲಿಗೆ ಎಸ್ ಸಿಡಿಸಿಸಿ ಬ್ಯಾಂಕ್ ಚಂದಾದಾರರ ದಾಖಲಾತಿಯಲ್ಲಿ ೩೧೭೯ ಚಂದಾದಾರರನ್ನು ನೊಂದಾಯಿಸುವ ಮೂಲಕ ಗುರಿ ಮೀರಿದ ಸಾಧನೆ ಮಾಡಿದೆ. ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ದಕ್ಷ ಮುಂದಾಳತ್ವದಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸತತ ನಾಲ್ಕು ವರ್ಷಗಳಿಂದ ಪಡೆದಿರುವುದು ಗಮನಾರ್ಹ ಸಾಧನೆ ಆಗಿದೆ.

ಈಚೆಗೆ ನವದೆಹಲಿಯಲ್ಲಿ ನಡೆದ ಎಪಿವೈ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾರತ ಸರಕಾರದ ಹಣಕಾಸು ಸೇವೆಗಳ ಜಂಟಿ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಗೋಯಲ್ , ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮುಖ್ಯಸ್ಥರಾದ ಎಸ್.ರಾಮನ್, ಮುಖ್ಯ ಮಹಾಪ್ರಬಂಧಕರಾದ ಪ್ರವೇಶ್ ಕುಮಾರ್ ಉಪಸ್ಥಿತಿಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕಿನ ಮಹಾಪ್ರಬಂಧಕರಾದ ಸುನಿಲ್ ಕುಮಾರ್ ಹೊಳ್ಳ ಹಾಗೂ ಸಹಾಯಕ ಮಹಾಪ್ರಬಂಧಕರಾದ ರಾಜೇಶ್ ಶೆಟ್ಟಿ ಅವರು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ಮಮತಾ ಶಂಕರ್ ಅವರಿಂದ ಸ್ವೀಕರಿಸಿದ್ದು , ಈ ಪ್ರಶಸ್ತಿಯನ್ನು ಶುಕ್ರವಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!