spot_img
Friday, March 13, 2026
spot_img

ಪ್ರಕೃತಿಯ ಸೊಬಗನ್ನು ಕ್ಯಾಮೆರಾ ಕಣ್ಣಿನಲ್ಲಿ ಸೆರೆಹಿಡಿಯುವುದೇ ರೋಮಾಂಚನ-ಸಂತೋಷ್ ಕುಂದೇಶ್ವರ್

ಕುಂದಾಪುರ: ಮೂಡ್ಲಕಟ್ಟೆ ಐ‌ಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಫೋಟೋಗ್ರಫಿ ಮತ್ತು ಡಿಜಿಟಲ್ ಕ್ಲಬ್ ನ ಆಶ್ರಯದಲ್ಲಿ ಫೋಟೋಗ್ರಫಿ ಕುರಿತು ವಿಚಾರ ಸಂಕಿರಣ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನ ಜರುಗಿತು.

ಅಂತರಾಷ್ಟ್ರೀಯ ವೇದಿಕೆಯಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಗಳಿಸಿದ ವನ್ಯಜೀವಿ ಛಾಯಾಚಿತ್ರಗ್ರಾಹಕರಾದ ಸಂತೋಷ್ ಕುಂದೇಶ್ವರ್ ರವರ ಛಾಯಾಚಿತ್ರ ಪ್ರದರ್ಶನಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾಲೇಜಿನ ಫೋಟೋಗ್ರಾಫಿ ಅಂಡ್ ಡಿಜಿಟಲ್ ಕ್ಲಬ್ ನ ವಾರ್ಷಿಕ ಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ತಮ್ಮ 25 ವರ್ಷದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು ಮತ್ತು ಫೋಟೋಗ್ರಾಫಿ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದವನ್ನು ನಡೆಸಿದರು. ಇದೇ ಸಂದರ್ಭದಲ್ಲಿ ಅವರ ೩೦ಕ್ಕೂ ಹೆಚ್ಚಿನ ಪ್ರಶಸ್ತಿ ಗಳಿಸಿದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನಗೊಂಡಿತು.

ವಿಜಯ ಕರ್ನಾಟಕ ದಿನಪತ್ರಿಕೆಯ ಹಿರಿಯ ವರದಿಗಾರರಾದ ಜಾನ್ ಡಿಸೋಜ ರವರು ಮಾತನಾಡುತ್ತಾ ಫೋಟೋಗ್ರಾಫಿ ಕುರಿತ ಆಸಕ್ತಿ ಮತ್ತು ಅನುಭವವನ್ನು ಹಂಚಿಕೊಂಡರು. ಅಂತರಾಷ್ಟ್ರೀಯ ಮಟ್ಟದಲ್ಲಿ ವನ್ಯಜೀವಿ ಛಾಯಾಚಿತ್ರ ಗ್ರಹಣದಲ್ಲಿ ಸಾಕಷ್ಟು ಹೆಸರುಗಳಿಸಿದ ಶ್ರೀ ಸಂತೋಷ್ ಕುಂದೆಶ್ವರ್ ರವರ ಗುರುತಿಸುವಿಕೆ ಮತ್ತು ಛಾಯಾಚಿತ್ರ ಪ್ರದರ್ಶನದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ವಿಭಿನ್ನ ವೇದಿಕೆಯನ್ನ ಒದಗಿಸಿ ಪ್ರತಿಭೆಯನ್ನ ಪೋಷಿಸುತ್ತಿರುವದರ ಕುರಿತು ಹರ್ಷ ವ್ಯಕ್ತಪಡಿಸಿದರು. ಐ.ಎಂ.ಜೆ ವಿದ್ಯಾ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಛಾಯಾಚಿತ್ರ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್. ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ, ಸಂತೋಷ್ ಕುಂದೇಶ್ವರ್ ರವರ ಪತ್ನಿ ಡಾ. ರಜತ ಕುಂದೇಶ್ವರ್, ಕ್ಲಬ್ ನ ಸಂಯೋಜಕರಾದ ಜಯಶೀಲ್ ಕುಮಾರ್ ಮತ್ತು ಜಿತೇಶ್ ಕುಮಾರ್ ಎ ಎಚ್. ಪ್ರಶಸ್ತಿ ವಿಜೇತ ಛಾಯಾಚಿತ್ರಗ್ರಾಹಕರಾದ ಅಮೃತ್ ಬೀಜಾಡಿ, ದಿನೇಶ್ ಅಮಿನ್, ನಾಗೇಶ್, ಜಾವೆದ್, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ತೃತೀಯ ಬಿಸಿ‌ಎ ವಿದ್ಯಾರ್ಥಿನಿ ನವ್ಯ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!