spot_img
Saturday, March 14, 2026
spot_img

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ 90 4ಜಿ ಸ್ಯಾಚುರೇಶನ್ ಟವರ್: ಟೆಲಿಕಾಂ ತಂತ್ರಜ್ಞಾನದಲ್ಲಿ ಸ್ವಾವಲಂಬನೆಯತ್ತ ಭಾರತದ ನಡೆ-ಬಿ.ವೈ.ರಾಘವೇಂದ್ರ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಒಡಿಶಾ ರಾಜ್ಯದಲ್ಲಿ ಬಿ.ಎಸ್.ಎನ್.ಎಲ್ ವತಿಯಿಂದ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ “ಸ್ವದೇಶಿ 4ಜಿ” ನೆಟ್‍ವರ್ಕ್ ಅನ್ನು ಉದ್ಘಾಟಿಸಿದರು. ಇದು ಟೆಲಿಕಾಂ ತಂತ್ರಜ್ಞಾನದಲ್ಲಿ ಸ್ವಾವಲಂಬನೆಯತ್ತ ಭಾರತದ ನಡೆಯನ್ನು ಎತ್ತಿ ತೋರಿಸುತ್ತದೆ ಎಂದು ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದಾದ್ಯಂತ 97,500 ಮೊಬೈಲ್ ಟವರ್‍ಗಳನ್ನು ಉಡಾವಣೆಯೊಂದಿಗೆ ನಿಯೋಜಿಸಲಾಗಿದ್ದು, ಅವುಗಳಲ್ಲಿ 92,600 4ಜಿ ಸೈಟ್‍ಗಳಾಗಿವೆ. ಸುಮಾರು ರೂ 37,000 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ರೀತಿ ನಿಯೋಜಿಸಲಾದ ನೆಟ್‍ವರ್ಕ್ ಕ್ಲೌಡ್-ಆಧಾರಿತ ಮತ್ತು ಭವಿಷ್ಯಕ್ಕೆ ಸಿದ್ಧವಾಗುವಂತೆ ವಿನ್ಯಾಸಗೊಳಿಸಲಾಗಿದ್ದು, 5ಜಿ ಗೆ ಸರಾಗವಾಗಿ ಅಪ್‍ಗ್ರೇಡ್ ಮಾಡುವ ಸಾಮರ್ಥ್ಯವನ್ನು ಹೊಂದಿರುತ್ತದೆ. ದೇಶದಾದ್ಯಂತ ಸುಮಾರು 26,700 ಕ್ಕೂ ಹೆಚ್ಚು ಸಂಪರ್ಕವಿಲ್ಲದ ಹಳ್ಳಿಗಳಿಗೆ ಈಗ ಟೆಲಿಕಾಂ ಪ್ರವೇಶವನ್ನು ಪಡೆಯುತ್ತಿದ್ದು, ಇದರಿಂದ ದೇಶದ ಸುಮಾರು 20 ಲಕ್ಷಕ್ಕೂ ಹೆಚ್ಚು (2 ಮಿಲಿಯನ್) ಹೊಸ ಚಂದಾದಾರರಿಗೆ ಪ್ರಯೋಜನವಾಗಲಿದೆ.

ಈ ಟವರ್‍ಗಳು ಸೌರಶಕ್ತಿ ಚಾಲಿತವಾಗಿದ್ದು, ಅವುಗಳನ್ನು ಭಾರತದ ಅತಿದೊಡ್ಡ ಹಸಿರು ಟೆಲಿಕಾಂ ಸೈಟ್‍ಗಳ ಸಮೂಹವನ್ನಾಗಿ ಮಾಡಿದೆ ಮತ್ತು ಈ ಉಪಕ್ರಮವು “ಡಿಜಿಟಲ್ ಭಾರತ್ ನಿಧಿ” ಮೂಲಕ ಹಳ್ಳಿಗಳಲ್ಲಿ ಶೇಕಡ 100 ರಷ್ಟು 4ಜಿ ಸ್ಯಾಚುರೇಶನ್ ಸಾಧಿಸುವ ಮಿಷನ್-ಮೋಡ್ ಪುಶ್‍ನ ಭಾಗವಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ ರಾಘವೇಂದ್ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾನ್ಯ ಪ್ರಧಾನ ಮಂತ್ರಿಗಳು ದೇಶದಾದ್ಯಂತ ಏಕಕಾಲಕ್ಕೆ ಬಿ.ಎಸ್.ಎನ್.ಎಲ್ ಟವರ್ ಗಳನ್ನು ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಪಣೆ ಮಾಡಿದ್ದು, ಅದರಲ್ಲಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೊಳಪಡುವ ಈ ಕೆಳಕಂಡ ತಾಲ್ಲೂಕುಗಳಲ್ಲಿ ಸುಮಾರು 90 ಸಂಖ್ಯೆಯ 4ಉ ಸ್ಯಾಚುರೇಶನ್ ಟವರ್ ಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಣೆ ಮಾಡಲಾಗಿದೆ ಎಂದು ಸಂಸದರಾದ ಬಿ.ವೈ ರಾಘವೇಂದ್ರರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸನಗರ- 14, ಸಾಗರ-26, ತೀರ್ಥಹಳ್ಳಿ- 16, ಶಿವಮೊಗ್ಗ -05, ಶಿಕಾರಿಪುರ- 04, ಸೊರಬ- 01, ಭದ್ರಾವತಿ- 01, ಬೈಂದೂರು-23. ಒಟ್ಟು 4ಜಿ ಸ್ಯಾಚುರೇಶನ್ ಟವರ್ ಗಳ ಸಂಖ್ಯೆ 90.

ಈ ರೀತಿಯ ಟೆಲಿಕಾಂ ತಂತ್ರಜ್ಞಾನದಲ್ಲಿ ದಿಟ್ಟ ಕ್ರಮವನ್ನು ತೆಗೆದುಕೊಂಡ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ಹಾಗೂ ದೂರ ಸಂಪರ್ಕ ಸಚಿವರಾದ ಜ್ಯೋತಿರಾದಿತ್ಯ ಎಂ ಸಿಂಧ್ಯಾ ರವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!