spot_img
Thursday, March 12, 2026
spot_img

ಸಿರಿಬಾಗಿಲು ಪ್ರತಿಷ್ಠಾನ- ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುಂದಾಪುರ : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಪ್ರತಿಷ್ಠಾನದ ಆಶ್ರಯದಲ್ಲಿ, ಕೆ.ಎಂ.ಸಿ.ಆಸ್ಪತ್ರೆ ಅತ್ತಾವರ, ಮಂಗಳೂರು ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ, ಮಂಗಳೂರು ಇವರ ಸಹಯೋಗದೊಂದಿಗೆ ನಡೆದ ತಪಾಸಣಾ ಶಿಬಿರವನ್ನು ಮಣಿಪಾಲದ ಕೆ. ಎಂ. ಸಿ. ಆಸ್ಪತ್ರೆಯ ಮಕ್ಕಳ ರೋಗ ತಜ್ಞರು, ಹಿರಿಯ ವೈದ್ಯರು ಆಗಿರುವಂತಹ ಡಾಕ್ಟರ್ ಸುನಿಲ್ ಮುಂಡ್ಕೂರು ಅವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.

ಗ್ರಾಮೀಣ ಪ್ರದೇಶದ ಜನರಿಗೆ ಇಂತಹ ಶಿಬಿರಗಳು ಅಗತ್ಯ . ಇಂತಹ ಶಿಬಿರದಲ್ಲಿ ಭಾಗವಹಿಸುವುದರಿಂದಾಗಿ ಅವಶ್ಯ ವಿದ್ದರೆ ಮುಂದಿನ ದಿನಗಳಲ್ಲಿ ನಗರ ಪ್ರದೇಶದ ದೊಡ್ಡ ಆಸ್ಪತ್ರೆಯಿಂದ ಪ್ರಯೋಜನವನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು .ಯಕ್ಷಗಾನದ ಪ್ರಧಾನ ಕೇಂದ್ರವಾಗಿರುವಂತಹ ಸಿರಿಬಾಗಿಲು ಪ್ರತಿಷ್ಠಾನ ಈ ರೀತಿ ಚಟುವಟಿಕೆ ನಡೆಸುತ್ತಿರುವುದು ಸಂತೋಷ ವಿಷಯ. ಮುಂದೆಯೂ ಇಂತಹ ಕಾರ್ಯಕ್ರಮಗಳು ನಿರಂತರ ನಡೆಯಲಿ ಎಂದು ಶುಭ ಹಾರೈಸಿದರು.

ಕೆ.ಎಂ.ಸಿ.ಆಸ್ಪತ್ರೆಯ ತಜ್ಞ ವೈದ್ಯರಾಗಿರುವಂತಹ ಡಾ. ಜೋಹಾನ್ ಸನ್ನಿ ,ಕನ್ಸಲೆಂಟ್ ಅಂಕಾಲಜಿಸ್ಟ್ ಇವರು ಕ್ಯಾನ್ಸರ್ ರೋಗದ ಲಕ್ಷಣಗಳು, ಯಾವ ರೀತಿ ಜಾಗೃತೆ ವಹಿಸಬೇಕು ,ಯಾರು ಭಯಪಡಬೇಕಾದ ಅಗತ್ಯವಿಲ್ಲ, ಇಂದಿನ ದಿನಗಳಲ್ಲಿ ಚಿಕಿತ್ಸೆ ಲಭ್ಯ. ರೋಗಿಗಳು ಸ್ಪಂದಿಸಿದಲ್ಲಿ ಗುಣಪಡಿಸಲು ಸಾಧ್ಯ ಎಂದರು.

ಮುಖ್ಯ ಅಥಿತಿಗಳಾಗಿ ಶ್ರೀ ಗೋಪಾಲಕೃಷ್ಣ,ಮೇಲ್ವಿಚಾರಕರು,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಸರಗೋಡು ವಲಯ. ಮತ್ತು ಮಧೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ. ಗೋಪಾಲಕೃಷ್ಣ ಅವರು ಭಾಗವಹಿಸಿ ಶುಭ ಹಾರೈಸಿದರು. ಕೆ. ಎಂ. ಸಿ. ಆಸ್ಪತ್ರೆ ಅತ್ತಾವರದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ  ಉದಯ ಜೆ. ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿಯ ಮಂಗಳೂರು ಇದರ ಕಾಸರಗೋಡು ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ  ವಿಷ್ಣುಪ್ರಸಾದ್,  ರಂಜನ್ ರವರು ನೇತೃತ್ವ ವಹಿಸಿದರು..

150ಕ್ಕೂ ಹೆಚ್ಚು ನಾಗರಿಕರು ಈ ಶಿಬಿರದ ಪ್ರಯೋಜನವನ್ನು ಪಡೆದರು. ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಫಲಾನುಭವಿಗಳಿಗೆ ಉಚಿತ ಔಷಧ ವಿತರಣೆಯನ್ನು ನಡೆಯಿತು. ಈ ಎಲ್ಲಾ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಪ್ರಗತಿ ಬಂದು ಸ್ವಸಹಾಯ ಸಂಘಗಳು ಒಕ್ಕೂಟ ಕಾಸರಗೋಡು ವಲಯ, ಎಫ್. ಎಚ್. ಸಿ. ಮಧೂರು ,ಕುತ್ಯಾಳ ನವ ಜೀವನ ಸಮಿತಿ ಕೂಡ್ಲು ,ಶ್ರೀ ಮಹೇಶ್ವರಿ ಮಹಿಳಾ ಮಂಡಲ ಪುಳ್ಕೂರು ಸಿರಿಬಾಗಿಲು, ಶಿವನಾರಾಯಣ ವಾಟ್ಸಪ್ ಬಳಗ ಮುಂತಾದವರು ಸಹಕಾರವಿತ್ತರು.

ಪ್ರತಿಷ್ಠಾನದ ಅದ್ಯಕ್ಷರಾದ ರಾಮಕೃಷ್ಣ ಮಯ್ಯ ಅತಿಥಿಗಳನ್ನು ಸ್ವಾಗತಿಸಿದರೆ, ಶ್ರೀರಾಜ ಮಯ್ಯ ನಿರೂಪಿಸಿದರು ,ಜಗದೀಶ್  ಕೆ. ಕೂಡ್ಲು ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!