spot_img
Saturday, April 25, 2026
spot_img

ಮೂಡ್ಲಕಟ್ಟೆ: ‘ನವೋನ್ಮೇಶ 2025’ ಉದ್ಘಾಟನೆ

kundapura: ಐ.ಎಮ್.ಜೆ ಇನ್ಸ್ಟಿಟ್ಯೂಶನ್ಸ್ ಮೂಡ್ಲಕಟ್ಟೆ ಇಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ನವೋನ್ಮೇಶ -2025 ಉದ್ಘಾಟನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.

ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಮಕ್ಕಳು ವಿದ್ಯೆ ಜೊತೆ ಉತ್ತಮ ಸಂಸ್ಕಾರ ಅಳವಡಿಸಿಕೊಳ್ಳಬೇಕು ಎಂದು ಹೇಳುತ್ತ ಸಂಸ್ಥೆಯ ಸ್ಥಾಪಕರಾದ ದಿ.ಐ.ಎಮ್. ಜಯರಾಮ್ ಶೆಟ್ಟಿ ಹಾಗೂ ಬೆಳವಣಿಗೆಗೆ ಕಾರಣೀಕರ್ತರಾದ ಸಿದ್ಧಾರ್ಥ್ ಜೆ ಶೆಟ್ಟಿ ಅವರನ್ನು ಶ್ಲಾಘಿಸಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ಚಲನಚಿತ್ರ ನಟ ದೀಪಕ್ ರೈ ಪಾಣಾಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಸಂಸ್ಥೆಯ ಅಕಾಡಮಿಕ್ ಡೈರೆಕ್ಟರ್ ಡಾ. ಎಸ್ ಎನ್ ಭಟ್ ಅಧ್ಯಕ್ಷೀಯ ಮಾತುಗಳನ್ನಾಡಿ ನವೋನ್ಮೇಶ ಪದದ ಅರ್ಥವನ್ನು ವಿವರಿಸಿ ಪ್ರತಿಭಾನ್ವೇಷಣೆಗೆ ಪೂರಕವಾದದ್ದು ಎಂದು ಹೇಳಿ ಕಾರ್ಯಕ್ರಮ ಆಯೋಜಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

ಐ.ಎಮ್.ಜೆ.ಐ.ಎಸ್.ಸಿ ಪ್ರಾಂಶುಪಾಲೆ ಡಾ. ಪ್ರತಿಭಾ ಪಾಟೀಲ್ ನವೋನ್ಮೇಶ್ ೨೦೨೫ ಸ್ಪರ್ದೆಯ ರೂಪುರೇಷೆಗಳನ್ನು ವಿವರಿಸಿದರು. ಎಮ್ ಐ ಟಿ ಕೆ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ಸ್ವಾಗತಿಸಿ , ಎಮ್ ಸಿ ಎನ್ ಪ್ರಾಂಶುಪಾಲೆ ಪ್ರೊಫೆಸರ್ ಜೆನಿಫ಼ರ್ ಫ಼್ರೀಡಾ ಮೆನೇಜಸ್ ವಂದಿಸಿದರು. ಡಾಟಾ ಸೈನ್ಸ್ ವಿಭಾಗದ ಮುಖ್ಯಸ್ಥರು ಪ್ರೊಫೆಸರ್ ಕಾರ್ತಿಕೇಯನ್ ಐ ಎಮ್‌ಜೆ ಸಮೂಹ ಸಂಸ್ಥೆಯ ಪರಿಚಯ ನೀಡಿದರು. ಪ್ರೊಫ಼ೆಸರ್ ಸೂಕ್ಷ್ಮ ಅಡಿಗ ಹಾಗೂ ಕಾಮರ್ಸ್ ವಿಭಾಗದ ಮುಖ್ಯಸ್ಥೆ ಪ್ರೊಫೆಸರ್ ಅರ್ಚನ ಉಪಧ್ಯಾಯ ಅತಿಥಿಗಳನ್ನು ಪರಿಚಯಿಸಿದರು. ಎಮ್ ಬಿ ಎ ವಿದ್ಯಾರ್ಥಿನಿ ಶಾಂಭವಿ ಕಾರ್ಯಕ್ರಮ ನಿರೂಪಿಸಿದರು.

ವಿವಿಧ ಪಿಯು ಕಾಲೇಜಿನ ೧೨೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಹಲವು ಸ್ಪರ್ದೆಗಳಲ್ಲಿ ಭಾಗವಹಿಸಿದರು. ಅಲೈಡ್ ಹೆಲ್ಥ್ ಸೈನ್ಸ್ ಡೀನ್ ಡಾ.ಪದ್ಮಚರಣ್ ಹಾಗೂ ಅಲೈಡ್ ಸೈನ್ಸ್ ಪ್ರಾಂಶುಪಾಲೆ ಪ್ರೊಫೆಸರ್ ಹೇಮಲತ , ಎಲ್ಲಾ ಕಾಲೇಜಿನ ವಿದ್ಯಾರ್ಥಿ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!