spot_img
Tuesday, March 10, 2026
spot_img

ತೆಕ್ಕಟ್ಟೆ ವಿಶ್ವವಿನಾಯಕ ಸಿ. ಬಿ. ಎಸ್. ಇ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

ತೆಕ್ಕಟ್ಟೆ: ನವೆಂಬರ್ 14 ಮಕ್ಕಳ ದಿನಾಚರಣೆಯ ಪ್ರಯುಕ್ತ ವಿಶ್ವವಿನಾಯಕ ಸಿ. ಬಿ. ಎಸ್. ಇ. ಶಾಲೆಯಲ್ಲಿ ವಿವಿಧ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಕಾರ್‍ಯಕ್ರಮದ ಅಧ್ಯಕ್ಷತೆ ವಹಿಸಿ ನೆಹರೂರವರ ಭಾವಚಿತ್ರಕ್ಕೆ ಪುಪ್ಷ ನಮನಗಳನ್ನು ಸಲ್ಲಿಸಿ ಮಕ್ಕಳ ದಿನಾಚರಣೆಯ ಮಹತ್ವವನ್ನು ತಿಳಿ ಹೇಳಿದರು. ರಾಷ್ಟ್ರದ ಪ್ರಥಮ ಪ್ರಧಾನ ಮಂತ್ರಿ ನೆಹರೂರವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಯಶಸ್ಸನ್ನು ಗಳಿಸಬೇಕೆಂದು ಮಕ್ಕಳಿಗೆ ಕರೆ ನೀಡಿದರು. ಇಂದಿನ ವಿದ್ಯಾರ್ಥಿಗಳೇ ಮುಂದಿನ ಪ್ರಜೆಗಳು, ರಾಷ್ಟ್ರ ನಿರ್ಮಾಣ ಯುವ ಪೀಳಿಗೆಯ ಕೈಯಲ್ಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ಹಾಗೂ ಶಿಕ್ಷಕ ವೃಂದದವರಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಹಾಗೆಯೇ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ, ವಿದ್ಯಾರ್ಥಿಗಳು, ಅದ್ಯಾಪಕರು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಮೂಲ್ಯ ಹಾಗೂ ಸುರಕ್ಷಾ ಕಾರ್‍ಯಕ್ರಮ ನಿರೂಪಿಸಿದರು, ಸುಮೇಧಾ ಸ್ವಾಗತಿಸಿದರು, ತೃಪ್ತಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!