spot_img
Friday, January 30, 2026
spot_img

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘಕ್ಕೆ ‘ಉತ್ತಮ ಪತ್ತಿನ ಸಹಕಾರ ಸಂಘ’ ಪ್ರಶಸ್ತಿ

ಜನಪ್ರತಿನಿಧಿ ವಾರ್ತೆ] ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸುವ ಸಲುವಾಗಿ 2025ನೇ ಸಹಕಾರ ಸಪ್ತಾಹದ ಸಂಭ್ರಮ ಆಚರಣೆ ಸಂದರ್ಭದಲ್ಲಿ ನೀಡಲಾಗುವ ಉತ್ತಮ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಆಯ್ಕೆಯಾಗಿದೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.16ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 72ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ನಡೆಯಲಿದೆ.

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಕಳೆದ 25ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಹೆಮ್ಮಾಡಿಯಲ್ಲಿ ಪ್ರಧಾನ ಕಛೇರಿ ಹೊಂದಿದ್ದು, ವಂಡ್ಸೆ, ಶಂಕರನಾರಾಯಣ, ಕುಂದಾಪುರ, ಬೈಂದೂರಿನಲ್ಲಿ ಶಾಖೆಗಳನ್ನು ಹೊಂದಿದೆ.

ಪ್ರಸ್ತುತ ಸಂಘದ ಅಧ್ಯಕ್ಷರಾಗಿ ರಾಜೀವ ಶ್ರೀಯಾನ್ ಗುಜ್ಜಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಉದಯ ಕುಮಾರ್ ಹಟ್ಟಿಯಂಗಡಿ, ಉಪಾಧ್ಯಕ್ಷರಾಗಿ ಸುಮತಿ ಬಿ ಮೊಗವೀರ, , ನಿರ್ದೇಶಕರಾಗಿ ಲೋಹಿತಾಶ್ವ ಆರ್ ಕುಂದರ್, ರವೀಂದ್ರ ಜಿ.ಮೆಂಡನ್, ಶ್ಯಾಮಲ ಜಿ.ಚಂದನ್, ರಾಮ ಮೊಗವೀರ, ರಾಮ ಮೊಗವೀರ ಬೈಂದೂರು, ವನಿತಾ ಎಸ್ ಮೊಗವೀರ, ಸುಶೀಲ ಕೆ ಮೊಗವೀರ ಸೇವೆ ಸಲ್ಲಿಸುತ್ತಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!