spot_img
Monday, December 15, 2025
spot_img

ಮಣಿಪಾಲ ಜ್ಞಾನಸುಧಾದ ಚಿರಾಗ್ ಅಥ್ಲೆಟಿಕ್ಸ್‌ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮಣಿಪಾಲ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದಿಂದ ಕಲಬುರ್ಗಿಯ ಚಂದ್ರಶೇಖರ ಪಾಟೀಲ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್ ಸಿ ಪೂಜಾರಿ ಇವರು 200ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಹಾಗೂ 100 ಮೀ. ಓಟದ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!