spot_img
Tuesday, March 10, 2026
spot_img

ವ್ಯವಹಾರ ಕುದುರಿಸುವುದು ಕೂಡ ಒಂದು ಕಲೆ-ಡಾ.ಜಿ.ಶಂಕರ್ | ‘ಜನತಾ ಅವಿಷ್ಕಾರ್ 2ಕೆ25 ಬಿಸಿನೆಸ್ ಡೇ ಉದ್ಘಾಟನೆ

ಕುಂದಾಪುರ: ಪ್ರತಿಯೊಂದು ಕ್ಷೇತ್ರದಲ್ಲೂ ಭವಿಷ್ಯವನ್ನು ರೂಪಿಸಿಕೊಳ್ಳುವ ಅವಕಾಶಗಳಿರುತ್ತವೆ. ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು. ಮಾರುಕಟ್ಟೆ ಅಧ್ಯಯನ ಮಾಡಿ ವ್ಯವಹಾರ ಕುದುರಿಸುವುದು ಕೂಡ ಒಂದು ಕಲೆ. ಎಲ್ಲರೂ ವೈದ್ಯರು, ಎಂಜಿನಿಯರ್ ಆಗಲೂ ಸಾಧ್ಯವಿಲ್ಲ. ಅವರರ ಆಸಕ್ತಿಗೆ ಅನುಗುಣವಾಗಿ ಭವಿಷ್ಯದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬೇಕು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ನಾಡೋಜ ಡಾ| ಜಿ.ಶಂಕರ್ ಹೇಳಿದರು.

ಅವರು ಹೆಮ್ಮಾಡಿ ಜನತಾ ಪ,.ಪೂ. ಕಾಲೇಜಿನಲ್ಲಿ ನ.೨೨ರಂದು ನಡೆದ ‘ಜನತಾ ಅವಿಷ್ಕಾರ್ 2ಕೆ25 ಬಿಸಿನೆಸ್ ಡೇ (ವ್ಯವಹಾರ ಮೇಳ) ಅನ್ನು ಉದ್ಘಾಟಿಸಿ, ಮಾತನಾಡಿದರು.

ವ್ಯವಹಾರ ಮಳಿಗೆ ಉದ್ಘಾಟಿಸಿದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ವಿಜ್ಞಾನ, ವಾಣಿಜ್ಯ, ಕಲಾ ಕ್ಷೇತ್ರಗಳಲ್ಲಿ ಬೇರೆ ಬೇರೆಯಾದ ಅವಕಾಶಗಳಿವೆ. ಸಂತೆ ವ್ಯಾಪಾರ ಹಾಗೂ ವಹಿವಾಟಿನಿಂದ ಮಾರಾಟಗಾರರಿಗೆ ಸಂತೃಪ್ತಿ ದೊರಕುತ್ತದೆ. ಸ್ವಾವಲಂಬಿ ಬದುಕು ಕಟ್ಟಿಕೊಂಡು, ಕನಿಷ್ಠ ೧೦ ಜನರಿಗೆ ಉದ್ಯೋಗಾವಕಾಶ ನೀಡುವ ಸಾಧನೆ ನಿಮ್ಮದಾಗಬೇಕು. ಗುರಿ, ಪ್ರಾಮಾಣಿಕತೆ, ಕಠಿನ ಪರಿಶ್ರಮ ಹಾಗೂ ಬದ್ಧತೆಯಿದ್ದರೆ ಸಾಧನೆ ಸಾಧ್ಯ ಎಂದರು

.
ವಿವಿವಿ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಯಾವುದೇ ಉದ್ಯಮ ಮಾಡಿದರೂ, ಅದಕ್ಕೆ ಉತ್ತಮ ಮಾರ್ಕೇಟಿಂಗ್ ಮಾಡದಿದ್ದರೆ ಅದು ವ್ಯರ್ಥ. ಮಾರ್ಕೆಟಿಂಗ್ ಮಾಡುವ ಕಲೆ ಗೊತ್ತಿರಬೇಕು. ಕೃಷಿಯಲ್ಲೂ ಉತ್ತಮ ಮಾರ್ಕೆಟಿಂಗ್ ಗೊತ್ತಿದ್ದರೆ ಲಾಭದಾಯಕವಾಗಿಸಬಹುದು ಎಂದು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು.

ಜನತಾ ಸಮೂಹ ಸಂಸ್ಥೆಗಳ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ್, ಆದಿಪರಾಶಕ್ತಿ ಗುರುಪೀಠ ಯಡಮೊಗೆಯ ರಾಜಾರಾಮ ಗುರೂಜಿ, ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷೆ ಅನಿತಾ ಆರ್. ಕೆ. ಉದ್ಯಮಿಗಳಾದ ಕಿರಣ್ ದೇವಾಡಿಗ, ಚಂದ್ರ ಕುಂದರ್ ಬೆಂಗಳೂರು, ಯೋಗೀಂದ್ರ ತಿಂಗಳಾಯ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ, ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಪ್ರಧಾನ ವ್ಯವಸ್ಥಾಪಕ ಉದಯ್‌ಕುಮಾರ ಹಟ್ಟಿಯಂಗಡಿ, ಪ್ರಗತಿ ಮಹಿಳಾ ವಿವಿದ್ದೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್, ಕಲಾವಿದ ಚೇತನ್ ಕುಮಾರ್ ಹಳ್ಳಿಹೊಳೆ, ಮತ್ತಿತರರು ಉಪಸ್ಥಿತರಿದ್ದರು.

ಜನತಾ ಪ.ಪೂ. ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಪ್ರಸ್ತಾವಿಸಿದರು. ಉಪನ್ಯಾಸಕರಾದ ಅಭಿಲಾಷ್ ಕ್ಷತ್ರೀಯ ಸ್ವಾಗತಿಸಿ, ಉದಯ್ ನಾಯ್ಕ್ ನಿರೂಪಿಸಿದರು. ಉಪ ಪ್ರಾಂಶುಪಾಲ ರಮೇಶ್ ಪೂಜಾರಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!