spot_img
Monday, March 16, 2026
spot_img

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ  ಪ್ರಶಸ್ತಿ -2025 ‘ ಪ್ರದಾನ

ಮಂಗಳೂರು: ಕರ್ನಾಟಕ ಮಾಧ್ಯಮ ಸಹಕಾರ ಹಾಗೂ ದಿ. ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ  ಬೆಂಗಳೂರು ಇದರ ವತಿಯಿಂದ  70ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ  ನಡೆದ ಕರ್ನಾಟಕ ಸಂಭ್ರಮದಲ್ಲಿ  ಮೊದಲ ಬಾರಿಗೆ ನೀಡಲಾದ ಪ್ರತಿಷ್ಠಿತ    ‘ ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ -2025  ‘ (WORLD GLOBAL INFLUENTIAL LEADERSHIP EXCELLENCE AWARD -2025) ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ‘ ಸಹಕಾರ ರತ್ನ’  ಡಾ.ಎಂ.ಎನ್. ರಾಜೇಂದ್ರ ಕುಮಾರ್  ಅವರಿಗೆ ಗುರುವಾರ  ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಸಹಕಾರ, ಸಮಾಜಸೇವೆ ಮತ್ತು ಬ್ಯಾಂಕಿಂಗ್  ಕ್ಷೇತ್ರದಲ್ಲಿ ಈ ನಾಡಿಗೆ ಸಲ್ಲಿಸಿರುವ ಅನುಪಮ ಸೇವೆಯನ್ನು ಗುರುತಿಸಿ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರಿಗೆ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ -2025  ‘ ಪ್ರಶಸ್ತಿಯನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ವಿಶ್ರಾಂತ ಉಪ ಕುಲಪತಿ ಪ್ರೋ.ಡಾ.ಎಸ್.ಚಂದ್ರಶೇಖರ್ ಶೆಟ್ಟಿ ಅವರು  ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ‘ ಕರ್ನಾಟಕ ಸಂಭ್ರಮ’  ಸಮಾರಂಭದಲ್ಲಿ ಪ್ರದಾನ ಮಾಡಿದರು.

ಡಾ.ಎಂ,ಎನ್. ರಾಜೇಂದ್ರ ಕುಮಾರ್  ಸಹಕಾರ ಕ್ಷೇತ್ರದಲ್ಲಿ ಸುಮಾರು 45 ವರ್ಷಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ  ತೊಡಗಿಸಿಕೊಂಡು ಸರ್ವಧರ್ಮಿಯರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಇವರು ಸಹಕಾರ ಕ್ಷೇತ್ರ ಮತ್ತು ಸಾಮಾಜಿಕ ಸೇವಾ ವಲಯದಲ್ಲಿಗೈದ ಅತ್ಯುನ್ನತ  ಸಮಾಜ ಸೇವೆಗೆ ಇದೀಗ ‘ವಿಶ್ವ ಜಾಗತಿಕ ಪ್ರಭಾವಿ ನಾಯಕತ್ವ ಶ್ರೇಷ್ಠತಾ ಪ್ರಶಸ್ತಿ ‘‌ ಗೆ ಪಾತ್ರರಾಗಿದ್ದಾರೆ.

ಸಹಕಾರ ಕ್ಷೇತ್ರದಲ್ಲಿಗೈದ ಸಮಾಜ ಸೇವೆಗೆ ಪ್ರಶಸ್ತಿ :  ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ , ಪ್ರಾಮಾಣಿಕ ಸೇವೆಯನ್ನು ಕಳೆದ 31  ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ  ಡಾ. ಎಂ.ಎನ್  ರಾಜೇಂದ್ರ ಕುಮಾರ್  ಅವರು ಈ ಬ್ಯಾಂಕ್ ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ . ಗ್ರಾಮೀಣ ಪ್ರದೇಶಗಳಲ್ಲಿ ಬ್ಯಾಂಕಿಂಗ್ ಸೇವೆಯ ಪರಿಕಲ್ಪನೆಯನ್ನು  ಅನುಷ್ಠಾನಗೊಳಿಸಿದ ಇವರು ಸಹಕಾರಿ ರಂಗಕ್ಕೆ ಹೊಸ ಆಯಾಮವನ್ನು ತಂದುಕೊಟ್ಟವರು. ಅತ್ಯಾಧುನಿಕ ತಂತ್ರಜ್ಞಾನವನ್ನು ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಅಳವಡಿಸಿ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡಿದ ಶ್ರೇಯಸ್ಸು ರಾಜೇಂದ್ರ ಕುಮಾರ್ ಅವರದ್ದು. ಸಹಕಾರ ಕ್ಷೇತ್ರ ಸೇರಿದಂತೆ ಹತ್ತು ಹಲವಾರು ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧಕರಾಗಿ, ನವೋದಯ ಸ್ವ ಸಹಾಯ ಸಂಘಗಳ  ಹರಿಕಾರರಾಗಿ ಅಪೂರ್ವ ಪರಂಪರೆಯನ್ನು ರೂಪಿಸಿದ ರಾಜೇಂದ್ರ ಕುಮಾರ್  ರಾಜ್ಯದ ಧೀಮಂತ ಸಹಕಾರಿ  ನಾಯಕರಲ್ಲಿ ಒಬ್ಬರು. ಮುಖ್ಯವಾಗಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನವೋದಯ ಸ್ವಸಹಾಯ ಸಂಘಗಳ ಮೂಲಕ ನೀಡಿ , ಆರ್ಥಿಕ ಚೈತನ್ಯವನ್ನು ತುಂಬಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎಸ್.
ಸಚ್ಚಿದಾನಂದ , ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು , ಭಾರತೀಯ ವಾಯು ಸೇನೆಯ ವಿಶ್ರಾಂತ ಏರ್ ವೈಸ್ ಮಾರ್ಷಲ್ ಬಿ.ಕೆ.ಮುರಳಿ , ಗ್ಲೋಬಲ್ ಸಾಯಿ ಫೌಂಡೇಶನ್ ಸಂಸ್ಥೆಯ ಕೋಶಾಧಿಕಾರಿ ಲವೀನಾ ಜನಾರ್ಧನ, ಡಿ.ಎ.ಪಾಂಡು ಮೆಮೋರಿಯಲ್ ಆರ್.ವಿ.ಡೆಂಟಲ್ ಕಾಲೇಜು ಬೆಂಗಳೂರು ಇದರ ವಿಶ್ರಾಂತ ಸಂಸ್ಥಾಪಕ ಪ್ರಾಂಶುಪಾಲರಾದ ಡಾ.ಕೆ.ಎಸ್.ನಾಗೇಶ್, ದಿ . ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇದರ ಸಂಸ್ಥಾಪಕ ಅಧ್ಯಕ್ಷ ಶ್ರಾವಣ ಲಕ್ಷ್ಮಣ್, ಗೌರವ ಅಧ್ಯಕ್ಷರಾದ ಎ. ನಾರಾಯಣಮೂರ್ತಿ ಹಾಗೂ ಅಧ್ಯಕ್ಷರಾದ ಗಣೇಶ್ ಕಾಸರಗೋಡು ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!