spot_img
Monday, March 2, 2026
spot_img

ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ ಸನ್ಮಾನ

ಮಂಗಳೂರು : ಅಂತರಾಷ್ಟ್ರೀಯ ಮಟ್ಟದ ಮಹಿಳಾ ಕಬಡ್ಡಿ ಆಟಗಾರ್ತಿ ಹಾಗೂ ಈಚೆಗೆ ಬಾಂಗ್ಲಾದೇಶದ ಢಾಕಾದಲ್ಲಿ ನಡೆದ ವಿಶ್ವಕಪ್ ಮಹಿಳಾ ಕಬಡ್ಡಿ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ಭಾರತ ತಂಡದ ಪ್ರಮುಖ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸನ್ಮಾನಿಸಿದ್ದಾರೆ.

ಸೋಮವಾರ ಎಸ್‌ಸಿಡಿಸಿಸಿ ಬ್ಯಾಂಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ..ಎಂ.ಎನ್.ರಾಜೇಂದ್ರ ಕುಮಾರ್ ಅವರು ಧನಲಕ್ಷ್ಮಿ ಪೂಜಾರಿ ಅವರನ್ನು ಸನ್ಮಾನಿಸಿ, ಮಾತನಾಡಿದರು.ಧನಲಕ್ಷ್ಮೀ ಪೂಜಾರಿ ಅವರು ವಿಶ್ವಕಪ್ ಮಹಿಳಾ ಕಬಡ್ಡಿ ಸ್ಪರ್ಧೆಯಲ್ಲಿ ಭಾಗವಹಿಸಿದ ಭಾರತ ತಂಡದ ಪ್ರಮುಖ ಆಟಗಾರ್ತಿಯಾಗಿದ್ದು ,ತನ್ನ ಆಲ್ರೌಂಡರ್ ಆಟದಿಂದ ತಂಡದ ಗೆಲುವಿನಲ್ಲಿ ಬಹು ಮುಖ್ಯ ಪಾತ್ರವನ್ನು ನಿಭಾಯಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯವರಾದ ಧನಲಕ್ಷ್ಮಿ ಪೂಜಾರಿ ಅವರ ಈ ಕ್ರೀಡಾ ಸಾಧನೆ ನಮ್ಮ ಜಿಲ್ಲೆಗೆ ಹೆಮ್ಮೆ ತರುವಂತದ್ದು . ಅವರ ಕ್ರೀಡಾ ಪ್ರತಿಭೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟೂ ಪ್ರಜ್ವಲಮಾನವಾಗಿ ಬೆಳಗಿ, ಹಲವಾರು ಪ್ರಶಸ್ತಿಗಳು ಅವರ ಕ್ರೀಡಾ ಸಾಧನೆಗೆ ಲಭಿಸಲಿ ಎಂದು ಶುಭ ಹಾರೈಸಿದರು.

ಧನಲಕ್ಷ್ಮಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ನಿಂದ 1 ಲಕ್ಷ :
ಧನಲಕ್ಷ್ಮಿ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಶಾಲು , ಫಲಪುಷ್ಪ , ಹಾರ , ಬೆಳ್ಳಿ ದೀಪ ಸ್ಮರಣಿಕೆಯೊಂದಿಗೆ 1ಲಕ್ಷದ ಚೆಕ್ ನ್ನು ನೀಡಿ ಗೌರವಿಸಿದರು.

ಸನ್ಮಾನಕ್ಕೆ ಉತ್ತರಿಸಿದ ಧನಲಕ್ಷ್ಮಿ ಪೂಜಾರಿ ಅವರು ತನ್ನ ಕ್ರೀಡಾ ಸಾಧನೆಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ಅಧ್ಯಕ್ಷರಾದ ಡಾ.ಎಂ.ಎನ್. ರಾಜೇಂದ್ರಕುಮಾರ್ ನನ್ನನ್ನು ಸನ್ಮಾನಿರುವುದು ತುಂಬಾ ಸಂತೋಷ ತಂದಿದೆ.ಅವರ ಅಭಿಮಾನಕ್ಕೆ ನಾನು ಚಿರ‌ಋಣಿ ಎಂದರು.

ಈ ಸಂದರ್ಭದಲ್ಲಿ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್(ರಿ) ಅಧ್ಯಕ್ಷ ರಾಜ್ ಕುಮಾರ್ ಅವರನ್ನು ಡಾ.ಎಂ.ಎನ್. ರಾಜೇಂದ್ರಕುಮಾರ್ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು , ಎಂ. ಮಹೇಶ್ ಹೆಗ್ಡೆ, ಅಶೋಕ್ ಕುಮಾರ್ ಶೆಟ್ಟಿ , ಜೈರಾಜ್ ಬಿ.ರೈ , ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪನಿಂಬಂಧಕರಾದ ರಮೇಶ್ ಹೆಚ್.ಎನ್. ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ನ ಟ್ರಸ್ಟೀ ಮೇಘರಾಜ್ ಆರ್.ಜೈನ್ , ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ ರಾವ್, ಉದ್ಯಮಿ ಜಯಪ್ರಕಾಶ್ ತುಂಬೆ ಮೊದಲಾದವರು ಉಪಸ್ಥಿತರಿದ್ದರು.
ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!