spot_img
Friday, January 30, 2026
spot_img

ಮುದೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ನಕ್ಷತ್ರ ಬೋವಿ, ಉಪಾಧ್ಯಕ್ಷರಾಗಿ ನಿಶಾದ್ ಆಯ್ಕೆ

ಕುಂದಾಪುರ: ಮುದೂರು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ನಕ್ಷತ್ರ ಬೋವಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಿಶಾದ್ ಆಯ್ಕೆಯಾಗಿದ್ದಾರೆ.

ಜ.22 ಗುರುವಾರ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು, ನಿರ್ದೇಶಕರಾದ ವಿಜಯ ಶಾಸ್ತ್ರೀ, ಚಂದ್ರಶೇಖರ ಪೂಜಾರಿ, ದೊಟ್ಟ ಪೂಜಾರಿ, ರಾಘವೇಂದ್ರ ಡಿ., ಶ್ರೀನಿವಾಸ ಆಚಾರಿ, ಸುವರ್ಣ ಕುಮಾರ್, ಶೆರಿನ್, ಜಯಂತ, ಬಸವ ನಾಯ್ಕ, ಉಷಾ, ಸುಶೀಲ ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಎ.ಎಂ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಸಹಕರಿಸಿದರು.

ಇತ್ತೀಚೆಗೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ 13 ಮಂದಿ ನಿರ್ದೇಶಕರು ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!