spot_img
Monday, March 16, 2026
spot_img

ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಧರ್ಮಸ್ಥಳ ಮೇಳದ ಹಾಸ್ಯ ಕಲಾವಿದ ಮಹೇಶ ಮಣಿಯಾಣಿ ಆಯ್ಕೆ

ಕುಂದಾಪುರ: ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಸುಳ್ಯ ಇದರ ಆಶ್ರಯದಲ್ಲಿ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಇವರ ತಂದೆತಾಯಿಗಳ ನೆನಪಿನಲ್ಲಿ ಕೊಡ ಮಾಡುವ 2026ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಧರ್ಮಸ್ಥಳ ಮೇಳದ ಪ್ರಸಿದ್ಧ ಹಾಸ್ಯಕಲಾವಿದರಾದ ಮಹೇಶ್ ಮಣಿಯಾಣಿ ಅವರನ್ನು ಆಯ್ಕೆ ಮಾಡಲಾಗಿದೆ.

ಸುಳ್ಯ ತಾಲೂಕಿನ ದೊಡ್ಡತೋಟದವರಾದ ಮಹೇಶ ಮಣಿಯಾಣಿಯವರು ಯಕ್ಷಗುರು ಕರ್ಗಲ್ಲು ವಿಶ್ವೇಶ್ವರ ಭಟ್, ಉಬರಡ್ಕ ಉಮೇಶ್ ಶೆಟ್ಟಿ ಯವರಿಂದ ಹೆಜ್ಜೆಗಾರಿಕೆ ಕಲಿತು ಮೇಳ ಸೇರಿದವರು. ಹಿರಿಯ ಯಕ್ಷಗಾನ ಕಲಾವಿದ ರೆಂಜಾಳ ರಾಮಕೃಷ್ಣರಾವ್ ಮಾರ್ಗದರ್ಶನದಲ್ಲಿ ಕಟೀಲು ಮೇಳ ಸೇರಿದ ಇವರು, ಆರಂಭದಲ್ಲಿ ಬಪ್ಪನಾಡು ಮೇಳ, ನಂತರ ಧರ್ಮಸ್ಥಳ ಮೇಳಗಳಲ್ಲಿ ಸ್ತ್ರೀವೇಷ, ಪುಂಡುವೇಷ ನಂತರ ಪೂರ್ಣಪ್ರಮಾಣದ ಹಾಸ್ಯಗಾರರಾಗಿ ಒಟ್ಟು 37 ವರ್ಷ ಯಕ್ಷ ಸೇವೆ ಮಾಡಿದವರು. ಮಳೆಗಾಲದ ತಿರುಗಾಟದಲ್ಲಿ ಕಳೆದ ಏಳು ವರ್ಷದಿಂದ ಮಹಿಳಾ ಕಲಾವಿದೆ ವಿದ್ಯಾ ಕೋಳೂರು ಮತ್ತು ಖ್ಯಾತ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ತಂಡದೊಂದಿಗೆ ಅಮೇರಿಕಾ, ಯುರೋಪ್ ಯಕ್ಷ ಪ್ರವಾಸದ ಖಾಯಂ ಕಲಾವಿದರಾಗಿದ್ದಾರೆ.

ಬಾಹುಕ, ರಕ್ಕಸ ದೂತ, ನಾರದ, ಮಕರಂದ, ವಿಜಯ, ಶ್ರೀನಿವಾಸ ಕಲ್ಯಾಣದ ಸಖ, ಮಹಾಕಲಿ ಮಗದೆಂದ್ರದ ಜಗಜಟ್ಟಿ, ಕೃಷ್ಣ ಲೀಲೆಯ ಮಂತ್ರವಾದಿ, ದಾರುಕ, ಸಮುದ್ರ ಮಥನದ ಮೂಕಾಸುರ ಮುಂತಾದವು ಇವರ ಜನಮೆಚ್ಚುಗೆಯ ಪ್ರಮುಖ ಪಾತ್ರಗಳು. ಹೊಗಳಿಕೆಯ ವೇಷ ಇವರಿಗೆ ಸಾಕಷ್ಟು ಖ್ಯಾತಿ ತಂದುಕೊಟ್ಟಿದೆ. ಧರ್ಮಸ್ಥಳ ಕ್ಷೇತ್ರ ಮಹಾತ್ಮೆಯಲ್ಲಿ 5-6 ಪಾತ್ರಗಳನ್ನು ನಿರ್ವಹಿಸುವ ಹಿರಿಮೆ ಇವರದ್ದು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!