spot_img
Tuesday, March 24, 2026
spot_img

ಬೈಂದೂರು ಉತ್ಸವದ ಪ್ರತಿಫಲ: ಕ್ಷೇತ್ರದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಖಾಸಗಿ ಕಂಪನಿಗಳ ಸಿ.ಎಸ್.ಆರ್. ನಿಧಿಯಿಂದ ರೂ.3 ಕೋಟಿ ಅನುದಾನ-ಬಿ.ಎಸ್.ಸುರೇಶ್ ಶೆಟ್ಟಿ ಉಪ್ಪುಂದ

ಬೈಂದೂರು: ಬೈಂದೂರು ಕ್ಷೇತ್ರಕ್ಕೆ ಸರಕಾರದ ಅನುದಾನಗಳು ಸಮರ್ಪಕವಾಗಿ ಬಾರದೆ ಇರುವುದರಿಂದ ಕ್ಷೇತ್ರದಲ್ಲಿನ ಸಾಧ್ಯವಾದಷ್ಟು ಸಮಸ್ಯೆಗಳನ್ನು ನಿವಾರಿಸಲು ಮತ್ತು ಜನರಿಗೆ ಸೇವೆ ನೀಡಲು ಸಂಸದರ ಮತ್ತು ಶಾಸಕರ ಪರಿಕಲ್ಪನೆಯಲ್ಲಿ ವಿವಿಧ ಕಂಪನಿಗಳ ಸಿ.ಎಸ್.ಆರ್. ನಿಧಿಗಳ ಮೂಲಕ ಸುಮಾರು ರೂ.20ಕೋಟಿ ಅನುದಾನ ಕ್ಷೇತ್ರದ ಸರಕಾರಿ ಶಾಲೆಗಳ ಅಭಿವೃದ್ದಿಗೆ ವಿನಿಯೋಗಿಸಲಾಗಿದೆ ಎಂದು ಸಮೃದ್ಧ ಬೈಂದೂರು ಇದರ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಉಪ್ಪುಂದ ಹೇಳಿದರು.

ಅವರು ಉಪ್ಪುಂದದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೈಂದೂರು ಉತ್ಸವದ ಬಳಿಕ ಕ್ಷೇತ್ರದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸುಮಾರು ರೂ.03 ಕೋಟಿ ಖಾಸಗಿ ಕಂಪನಿಗಳ ಸಿ.ಎಸ್.ಆರ್. ನಿಧಿ ಕ್ಷೇತ್ರಕ್ಕೆ ಬಂದಿದೆ. ಸಮೃದ್ಧ ಬೈಂದೂರಿನ 300 ಟ್ರೀಸ್ ಯೋಜನೆ ಮೂಲಕ 100 ಹೆಚ್ಚು ಶಾಲೆಗಳಿಗೆ ತರಗತಿ ಕೋಣೆಗಳು, ಶೌಚಾಲಯ, ಪೀಠೋಪಕರಣ, ಪುಸ್ತಕಗಳು, ಶಾಲಾ ಬ್ಯಾಗ್, ಲೈಬ್ರರಿ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಲ್ಯಾಬ್, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ಯೋಜನೆ ಮೂಲಕ ಸರಕಾರಿ ಶಾಲೆಗಳನ್ನು ಬಲಗೊಳಿಸಲಾಗುತ್ತಿದೆ ಎಂದರು.

ರೋಬೊಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆ 1 ಕೋಟಿಗೂ ಮಿಕ್ಕಿ ಅನುದಾನ ನೀಡಿದ್ದು, ಬೈಂದೂರು ಸರಕಾರಿ ಮಾದರಿ ಶಾಲೆಯ ಕಟ್ಟಡದ ಭೂಮಿ ಪೂಜೆಗೆ ಕಂಪನಿಯ ಸಿಇಓ ರೋನ್ ಮಾನ್ ಭೂಮಿ ಪೂಜೆಗೆ ಆಗಮಿಸಲಿದ್ದಾರೆ ಎಂದರು.

ಗ್ರಾಮೀಣ ಭಾಗದ ಆಯ್ದ ಶಾಲೆಗಳ ಮಕ್ಕಳಿಗೆ ಸೈಕಲ್ ವಿತರಣೆ ನಡೆಯಲಿದೆ. ಶಾಸಕರ ವಿಶೇಷ ಮನವಿ ಮೇರೆಗೆ ಎಂ.ಆರ್.ಪಿ.ಎಲ್ ಸಂಸ್ಥೆ ಒಂದು ಕೋಟಿ, ಕ್ಯಾನ್ ಫಿನ್ ಹೋಮ್ ಲಿ. ಸಂಸ್ಥ ರೂ. 1.5 ಕೋಟಿ ಅನುದಾನವನ್ನು ಕ್ಷೇತ್ರಕ್ಕೆ ನೀಡಿದೆ. ಕಾಲೇಜುಗಳಿಗೆ ಸೋಲಾರ್ ಬ್ಯಾಕ್ ಅಪ್ ಸಿಸ್ಟಮ್ ಅಳವಡಿಕೆ, ಶೌಚಾಲಯ ನಿರ್ಮಾಣ ಯೋಜನೆಗಳನ್ನು ಪೂರ್ಣಗೊಳಿಸಿದೆ. ಸ್ವಯಂ ಸ್ಪೂರ್ತಿ ಫೌಂಡೇಶನ್ ಬೆಂಗಳೂರು, ಯೂಥ್ ಫಾರ್ ಸೇವಾ, ರಮಣಶ್ರೀ ಟ್ರಸ್ಟ್ ಬೆಂಗಳೂರು ಕೈಜೋಡಿಸಿದೆ ಎಂದರು.

ಹೇನಬೇರುನಲ್ಲಿ ಸೇವಾಧಾಮದ ಮೂಲಕ ಬೆನ್ನು ಹುರಿ ಅಪಘಾತಕ್ಕೆ ಒಳಗಾದ ದಿವ್ಯಾಂಗರು ಇದರ ಪ್ರಯೋಜನ ಪಡೆಯಲಿದ್ದಾರೆ. ಕೆಎಂಸಿ ಮಣಿಪಾಲ್ ನೆರವಿನೊಂದಿಗೆ ಅಂಜಲಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮತ್ತು ತುರ್ತು ಘಟಕ ಸ್ಥಾಪನೆ ಮಾಡಲಾಗಿದೆ. ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಮೃದ್ಧ ಬೈಂದೂರು ವತಿಯಿಂದ 1.5 ಲಕ್ಷ ವೆಚ್ಚದಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಉಪಯೋಗವಾಗುವ ರಕ್ತ ಪರೀಕ್ಷೆ ಯಂತ್ರವನ್ನು ನೀಡಲಾಗಿದೆ.

ಕ್ಷೇತ್ರಕ್ಕೆ 300ಕ್ಕೂ ಅಧಿಕ ಕಾಲುಸಂಕಗಳ ಅಗತ್ಯವಿದ್ದು, ಡಾ. ಆರ್ ಅರುಣಾಚಲಂ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಈ ವರ್ಷ 25 ಹೊಸ ಕಾಲು ಸಂಕ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!