spot_img
Friday, February 13, 2026
spot_img

ಎಂಐಟಿಕೆನಲ್ಲಿ ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್‌ನ ಸ್ಮಾರ್ಟ್ ಇನೋವೇಶನ್ ಕೇಂದ್ರದ ಉದ್ಘಾಟನೆ

ಕುಂದಾಪುರ : ಐ ಎಮ್‌ಜೆ ಇನ್ಸ್ಟಿಟ್ಯೂಟ್ ಅಧ್ಯಕ್ಷರಾದ  ಸಿದ್ಧಾರ್ಥ ಜೆ. ಶೆಟ್ಟಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ಮಾರ್ಗದರ್ಶನದಡಿ,  ಶೈಕ್ಷಣಿಕ ಶ್ರೇಷ್ಠತೆ, ಸಂಶೋಧನಾ ಆಧಾರಿತ ನವೀನತೆ ಹಾಗೂ ಜಾಗತಿಕ ಸಹಕಾರಗಳತ್ತ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿರುವ ಮೂಡ್ಲಕಟ್ಟೆ ತಾಂತ್ರಿಕ ಸಂಸ್ಥೆಯ ಸಂಶೋಧನಾ ವಿಭಾಗದ ಅಡಿಯಲ್ಲಿ ಕೃತಕ ಬುದ್ಧಿಮತ್ತೆ, ಡ್ರೋನ್ ಹಾಗೂ ರೋಬೋಟಿಕ್ಸ್‌ನ ಸ್ಮಾರ್ಟ್ ಇನೋವೇಶನ್ ಕೇಂದ್ರವನ್ನು ಫೆಬ್ರವರಿ 12, 2026 ರಂದು  ಉದ್ಘಾಟಿಸಲಾಯಿತು. ಈ ಕೇಂದ್ರವನ್ನು  ಸಂಶೋಧನೆ ಹಾಗೂ ಸಲಹಾ ವಿಭಾಗದ ಡೀನ್ ಆಗಿರುವ ಡಾ. ಇಂದ್ರ ವಿಜಯ್ ಸಿಂಗ್ ಅವರು ಮುನ್ನಡೆಸುತ್ತಿದ್ದು, ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಉನ್ನತ ಸಂಶೋಧನೆ, ನವೀನತೆ ಹಾಗೂ ಕೈಗಾರಿಕಾ ಸಹಕಾರವನ್ನು ಉತ್ತೇಜಿಸುವ ಉದ್ದೇಶ ಹೊಂದಿದೆ.
ಮುಖ್ಯ ಅತಿಥಿಯಾಗಿ  ತಾಕೇಶಿ ಒಗುರಾ, ಏಶಿಯ ಬಿಸ್ ನೆಸ್ ಹೆಡ್, ಕೆಟಿಸಿ ಹೋಲ್ಡಿಂಗ್ ಜಪಾನ್ ಅವರು ಆಗಮಿಸಿದ್ದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ತಮ್ಮ ಭಾಷಣದಲ್ಲಿ ಅವರು ಜಪಾನಿನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಅಂತರರಾಷ್ಟ್ರೀಯ ವೃತ್ತಿ ಅವಕಾಶಗಳ ಕುರಿತು ಮಾತನಾಡಿ, ಕೃತಕ ಬುದ್ಧಿಮತ್ತೆ ಮತ್ತು ಉನ್ನತ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಂಸ್ಥೆಯೊಂದಿಗೆ ಸಹಕಾರವನ್ನು ಬಲಪಡಿಸುವ ಆಸಕ್ತಿ ವ್ಯಕ್ತಪಡಿಸಿದರು.

ಗೌರವಾನ್ವಿತ ಅತಿಥಿಯಾಗಿದ್ದ ಶ್ರೀ ಅನಿಲ್ ಬಸೋತ್ರ ಕೊ ಫ಼ೌಂಡರ್ ಮತ್ತು ಸಿ ಇ ಒ ಕೆಟಿಸಿಎಚ್ ಭಾರತ,   ಅವರು ಸಂಸ್ಥೆಯೊಂದಿಗೆ ಸಹಭಾಗಿತ್ವಕ್ಕೆ ಬದ್ಧತೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಜಾಗತಿಕ ಪರಿಚಯ ಮತ್ತು ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಬಗ್ಗೆ ಮಾತನಾಡಿದರು.

ವಿಶೇಷ ಅತಿಥಿಯಾಗಿದ್ದ ಡಾ. ಹರಿ ಕೃಷ್ಣ ಮರಂ, ವಿಷನ್ ಡಿಜಿಟಲ್ ಇಂಡಿಯಾ ಸಂಸ್ಥೆಯ ಅಧ್ಯಕ್ಷರು ಹಾಗೂ ಗ್ಲೋಬಲ್ ಡಿಜಿಟಲ್ ವಿಶ್ವವಿದ್ಯಾಲಯದ ಉಪಕುಲಪತಿಗಳು, ಸಭೆಯನ್ನುದ್ದೇಷಿಸಿ ಮಾತನಾಡಿ  ಡಿಜಿಟಲ್ ಇಂಡಿಯಾ ದೃಷ್ಟಿಕೋನಕ್ಕೆ ಹೊಂದುವಂತೆ ತಮ್ಮ ದೃಷ್ಟಿಯನ್ನು ಹಂಚಿಕೊಂಡು, ಕೃತಕ ಬುದ್ಧಿಮತ್ತೆ ಆಧಾರಿತ ನವೀನತೆ ಮತ್ತು ಭಾರತದಲ್ಲಿ ಉದ್ಯೋಗಾವಕಾಶಗಳ ಸೃಷ್ಟಿಯ ಮಹತ್ವವನ್ನು ಒತ್ತಿಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗಡೆ ಅವರು ಸಂಸ್ಥೆಯ ಸಂಶೋಧನಾ ಶ್ರೇಷ್ಠತೆ ಮತ್ತು ಕೈಗಾರಿಕಾ ಸಂಪರ್ಕದ ಮೇಲಿನ ಒತ್ತುವರಿಯನ್ನು ವಿವರಿಸಿದರು.ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ,  ಈ ಕಾರ್ಯಕ್ರಮವನ್ನು ಶ್ಲಾಘಿಸಿ, ಸ್ಮಾರ್ಟ್ ಇನೋವೇಶನ್ ಕೇಂದ್ರ ಸ್ಥಾಪನೆಗಾಗಿ ಸಂಶೋಧನಾ ವಿಭಾಗವನ್ನು ಅಭಿನಂದಿಸಿದರು.
ಸ್ಮಾರ್ಟ್ ಇನೋವೇಶನ್ ಕೇಂದ್ರದ ಸಮಗ್ರ ಅವಲೋಕನವನ್ನು ಶ್ರೀ ಸ್ರಜನ್ ಕುಲಾಲ್ ಅವರು ನೀಡಿದರು. ಅವರು ಕೇಂದ್ರದ ದೃಷ್ಟಿ, ಉದ್ದೇಶಗಳು ಮತ್ತು ಕೃತಕ ಬುದ್ಧಿಮತ್ತೆ, ಡ್ರೋನ್ ತಂತ್ರಜ್ಞಾನ ಹಾಗೂ ರೋಬೋಟಿಕ್ಸ್ ಕ್ಷೇತ್ರಗಳಲ್ಲಿನ ಮುಖ್ಯ ಕೇಂದ್ರೀಕೃತ ವಲಯಗಳನ್ನು ವಿವರಿಸಿದರು.
ಈ ಕಾರ್ಯಕ್ರಮವನ್ನು ಸಂಶೋಧನಾ ಪ್ರೋಗ್ರಾಮರ್ ಶ್ರೀ ದಿಲೀಪ್ ಅವರು ಸಮರ್ಥವಾಗಿ ನಿರ್ವಹಿಸಿದರು. ಕಾರ್ಯಕ್ರಮವು ತೃತೀಯ ವರ್ಷದ ಎಐಎಂಎಲ್ ವಿದ್ಯಾರ್ಥಿ ಅಕ್ಷಯ್ ಮತ್ತು ತಂಡದ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ಎಐಎಂಎಲ್ ವಿಭಾಗದ ಪ್ರಾಧ್ಯಾಪಕಿ  ಶ್ರೀನಿಧಿ ಅವರು ಸ್ವಾಗತ ಭಾಷಣವನ್ನು ನೀಡಿದರು.ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪ್ರಾಧ್ಯಾಪಕಿ ಅಕ್ಷತಾ ನಾಯಕ್ ಹಾಗೂ ಪ್ರಾದ್ಯಾಪಕಿ ಸುಷ್ಮ ಶೆಟ್ಟಿ ಅವರು ಅತಿಥಿಗಳನ್ನು ಪರಿಚಯಿಸಿದರು.
ಕಾರ್ಯಕ್ರಮವನ್ನು ತೃತೀಯ ವರ್ಷದ ಸಿಎಸ್ಇ ವಿದ್ಯಾರ್ಥಿನಿ ಇಶ್ರಾತ್ ಅವರು ಸುಂದರವಾಗಿ ನಿರೂಪಿಸಿದರು. ಕಾರ್ಯಕ್ರಮವು ತೃತೀಯ ವರ್ಷದ ಎಐಎಂಎಲ್ ವಿದ್ಯಾರ್ಥಿನಿ ನಿಕಿತಾ ಅವರ ಧನ್ಯವಾದ ಭಾಷಣದೊಂದಿಗೆ ಮುಕ್ತಾಯವಾಯಿತು. ಎಲ್ಲಾ ವಿಭಾಗಗಳ ಉಪನ್ಯಾಸಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದು, ತಂತ್ರಜ್ಞಾನ ನವೀನತೆ ಮತ್ತು ಸಂಶೋಧನಾ ಶ್ರೇಷ್ಠತೆಯತ್ತ ಸಂಸ್ಥೆಯ ಪ್ರಯಾಣದಲ್ಲಿ ಇದು ಮಹತ್ವದ ಹೆಜ್ಜೆಯಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!